ಮಂಗಳೂರು: ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ವತಿಯಿಂದ ಸಾಧನಾ ಪುರಸ್ಕಾರ ಲಭಿಸಿದೆ.
https://chat.whatsapp.com/FCEnlTkAKCC0MGPhXtX4i4
ಶನಿವಾರ ನಡೆದ ಎಸ್ಸಿಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಮೋಹನ್ ಎಂ.ಕೆ. ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಜನಾರ್ದನ ಕುಲಾಲ್, ನಿರ್ದೇಶಕರಾದ ಬಿ. ರಮೇಶ್ ಸಾಲ್ಯಾನ್, ಪ್ರೇಮನಾಥ್ ಬಂಟ್ವಾಳ್, ಅರುಣ್ ಕುಮಾರ್, ಕಿರಣ್ ಕುಮಾರ್ ಹಾಗೂ ಸುರೇಶ್ ಎನ್. ಉಪಸ್ಥಿತರಿದ್ದರು.
ಸಂಘದ ಸಾಧನೆಗೆ ದೊರೆತ ಈ ಪುರಸ್ಕಾರವು ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರ ಸಹಕಾರ ಮತ್ತು ಪರಿಶ್ರಮಕ್ಕೆ ಸಂದ ಗೌರವವಾಗಿದೆ.



