ತೊಕ್ಕೊಟ್ಟು : ದಕ್ಷಿಣಕನ್ನಡ ಜಿಲ್ಲೆಯ ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ ತೊಕ್ಕೊಟ್ಟು ಇದರ 14ನೇ ವರ್ಷದ ವಾರ್ಷಿಕ ಮಹಾಸಭೆ ಭಾನುವಾರ ಕುತ್ತಾರು M.Y.M ಸಭಾಂಗಣದಲ್ಲಿ ಅಧ್ಯಕ್ಷರಾದ ವಿಜಯ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಸದಸ್ಯರಾದ ಸುಕೇಶ್ ಮಂಜನಾಡಿ ಸ್ವಾಗತಿಸಿದರು. ಮಹಾಸಭೆಯನ್ನು ಸಹಕಾರಿಯ ಅಧ್ಯಕ್ಷರು ವಿಜಯ ಗೌಡ, ಉಪಾಧ್ಯಕ್ಷರು ಸುಂದರ ಗಟ್ಟಿ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿಯ ಅಧ್ಯಕ್ಷರಾದ ವಿಜಯ ಗೌಡ, ಸಂಘವು ಪ್ರಸ್ತುತ ರೂ.4.82 ಕೋಟಿ ವ್ಯವಹಾರ ನಡೆಸಿದ್ದು, ರೂ.7,37,460.83 ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.5 ಪ್ರತಿಶತ ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಕ್ರಮ್ ಶೆಟ್ಟಿಯವರು 2025 – 26ನೇ ಸಾಲಿನ ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು.
2026ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದ ಸ್ವಸಹಾಯ ಸಂಘದ ಸದಸ್ಯರ 5 ಮಕ್ಕಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು ಮತ್ತು 1 ರಿಂದ 10ನೇ ತರಗತಿಯವರೆಗಿನ ಸ್ವಸಹಾಯ ಸದಸ್ಯರ 25 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. 2 ಅತ್ಯುತ್ತಮ ಸ್ವಸಹಾಯ ಸಂಘ ಪ್ರಶಸ್ತಿ ಹಾಗೂ 15 ಉತ್ತಮ ಸ್ವಸಹಾಯ ಸಂಘಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಾರ್ಷಿಕ ಸಭೆಯಲ್ಲಿ ಕಳೆದ 2021-2026ರ ವರೆಗೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರಿಗೆ ಜನ್ಮಭೂಮಿ ಅಭಿನಂದನೆ ನೀಡಿ ಗೌರವಿಸಲಾಯಿತು. ಈ ವಾರ್ಷಿಕ ಮಹಾಸಭೆಗೆ ಸಹಕಾರಿಯ ನಿರ್ದೇಶಕರಾದ ಸೂರಜ್, ಜಗನ್ನಾಥ ಶೆಟ್ಟಿ, ಮಹೇಶ್ ಕೆ., ಚಂದು ನಾಯ್ಕ, ವಿಶ್ವನಾಥ, ಶೋಭಾ ಕಜೆ, ನಾಗವೇಣಿ ಶೆಟ್ಟಿ, ವೀಣಾ ಭಟ್, ಅಮಿತಾ ಶೆಟ್ಟಿ, ಸಹಕಾರಿಯ ಸಿಬ್ಬಂದಿಗಳು, ಪಿಗ್ಮಿ ಏಜೆಂಟರು ಮತ್ತು ಸಹಕಾರಿಯ ಸದಸ್ಯರು ಹಾಜರಿದ್ದರು. ಹರೀಶ್ ಕೆ ಯವರು ವಂದಿಸಿದರು. ಸಹಕಾರಿಯ ಸದಸ್ಯರಾದ ಸುಕೇಶ್ ಮಂಜನಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.











