ಮಂಗಳೂರು: ಸಹಕಾರಿ ರಂಗದಲ್ಲಿ ವೇಗವಾಗಿ ಬೆಳೆಯುತ್ತಿರುವ ಶ್ರೀಶಾ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಸುಸಜ್ಜಿತ 6ನೇ ಶಾಖೆ ಪದವಿನಂಗಡಿ -ಬೋಂದೆಲ್ ಚರ್ಚ್ ಸನಿಹದ ಸನ್ನಿಧಿ ಎನ್ಕ್ಲೇವ್ ಕಟ್ಟಡದಲ್ಲಿ ಭಾನುವಾರ ಉದ್ಘಾಟನೆಗೊಂಡಿತು.
https://chat.whatsapp.com/FCEnlTkAKCC0MGPhXtX4i4
ಧರ್ಮಗುರು ವಂ| ಬೇಸಿಲ್ ವಾಸ್ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಶ್ರೀಶಾ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮೂಲಕ ವೈದ್ಯಕೀಯ ನೆರವು, ವಿದ್ಯಾರ್ಥಿವೇತನ ನೀಡುವಂತಹ ಸೇವಾ ಕಾರ್ಯಗಳು ಶ್ಲಾಘನೀಯ. ಸೊಸೈಟಿಯು ಬೆಳೆದು ಮತ್ತಷ್ಟು ಶಾಖೆಗಳನ್ನು ಪ್ರಾರಂಭಿಸಿ ಅತ್ಯುತ್ತಮ ಸೇವೆ ನೀಡುವಂತಾಗಲಿ ಎಂದರು.
ಸದಸ್ಯರಿಗೆ ಶೇ. 25 ಡಿವಿಡೆಂಡ್:
ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್. ಗುರುರಾಜ್ ಮಾತನಾಡಿ, 2019ರಲ್ಲಿ ಮಂಗಳೂರಿನ ಉರ್ವಸ್ಟೋರ್ ಬಳಿಯ ರಘು ಬಿಲ್ಡಿಂಗ್ ನಲ್ಲಿ ಆರಂಭವಾದ ಶ್ರೀಶಾ ಸೊಸೈಟಿಯು ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಪರಿಶ್ರಮ ಹಾಗೂ ನಗುಮುಖದ ಸೇವೆಯಿಂದ ಏಳು ವರ್ಷಗಳಲ್ಲಿ ಆರನೇ ಶಾಖೆ ತೆರೆಯಲು ಸಾಧ್ಯವಾಯಿತು. ಸಂಸ್ಥೆಯು ಆರೋಗ್ಯ, ಶಿಕ್ಷಣ, ಸೈನ್ಯ ದ ಕುರಿತು ನಿರಂತರ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಸೊಸೈಟಿಯು ಆರಂಭದ ವರ್ಷದಿಂದಲೂ ನಿವ್ವಳ ಲಾಭ ಗಳಿಸುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಗರಿಷ್ಠ ಶೇ.25 ಡಿವಿಡೆಂಡ್ ನೀಡುತ್ತಿದ್ದು ಸದಸ್ಯರ ಪ್ರೀತಿ, ಗೌರವಕ್ಕೆ ಪಾತ್ರವಾಗಿದೆ. 2025-26ನೇ ಸಾಲಿನಲ್ಲಿ ಶ್ರೀಶಾ ಸೌಹಾರ್ದ ಸಹಕಾರಿಯು 2.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ದಾಖಲೆಯಾಗಿದೆ ಎಂದರು.
ಶಾರದಾ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್ ಶುಭ ಹಾರೈಸಿದರು. ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯೆ ಸಂಗೀತಾ ನಾಯಕ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇದರ ನಿರ್ದೇಶಕಿ ಭಾರತಿ ಜಿ. ಭಟ್, ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಸೊಸೈಟಿಯ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀಶಾ ಸೌಹಾರ್ದ ಸೊಸೈಟಿಯ ಉಪಾಧ್ಯಕ್ಷ ಉದಯ ವಿ.ಶಾಸ್ತ್ರಿ, ಪದವಿನಂಗಡಿ ಶಾಖೆಯ ಪ್ರಬಂಧಕರಾದ ರಂಜನಾ ಹೆಗಡೆ ಇದ್ದರು. ನಿರ್ದೇಶಕರಾದ ಪ್ರಸನ್ನ ಕುಮಾರ್, ಸುರೇಶ್ ಬೈಂದೂರು, ರಾಜೇಶ್ ಪುಂಜಾಲಕಟ್ಟೆ, ರಾಧಾ ರಾಘವೇಂದ್ರ, ವತ್ಸಲಾ ಟಿ, ರವಿಚಂದ್ರ ಕೆ, ರಾಜೇಶ್ ನಾಯರ್, ಮಾಧವ ಎಂ. ಎಸ್., ಅನಿಲ್ ಪ್ರಶಾಂತ್ ಡಿಸೋಜ ಸಹಕರಿಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ ವಂದಿಸಿದರು. ಸಿಂಧೂ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.











