ಬೆಂಗಳೂರು: ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತ ಬೆಂಗಳೂರು ಇದರ 10ನೇ ವಾರ್ಷಿಕ ಮಹಾಸಭೆಯು ಭಾನುವಾರ ಚಿಕ್ಕಬಾಣಾವರದ ಊರ ಬಸವಣ್ಣ ದೇವಸ್ಥಾನ ಆವರಣದಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಲೋಕೇಶ್ ಎಸ್ ಎಸ್, ಮಾತನಾಡಿ ಸಹಕಾರಿಯು ಒಟ್ಟು 928 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 4.97 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಮಾಹಿತಿ ನೀಡಿದರು. ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಗವು 2017ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದ ಯೋಗಾನಂದ ಮೂರ್ತಿ ಎನ್, ಮುಂದಿನ ಸಾಲಿನ ಅಂದಾಜು ಆಯವ್ಯಯ ಮಂಡಿಸಿದರು.

ಮಹಾಸಭೆಯಲ್ಲಿ ನಿರ್ದೇಶಕರಾದ ಕೈಲಾಸ್ ಮೂರ್ತಿ ಜಿ.ಎಸ್, ಶಿವಗಂಗಾಧರ್ ಯು, ಲಕ್ಷ್ಮೀಪತಿ ಕೆ, ಬಸವರಾಜು, ಶೋಭಾ, ಪುಷ್ಪಲತಾ ಎಚ್., ಗಾಯತ್ರಿ ಮತ್ತು ಗೀತಾ ಮತ್ತಿತರರು ಉಪಸ್ಥಿತರಿದ್ದರು. ಪುಟಾಣಿ ಮಕ್ಕಳ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಆರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀ ಮಹೇಶ್ವರಮ್ಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಕರಾದ ಯೋಗೇಶ್ ಕೆ ಅವರಿಗೆ ಮತ್ತು ಸೊಸೈಟಿ ಮಹಿಳಾ ನಿರ್ದೇಶಕಿ ಪುಷ್ಪಲತಾ ರವರ ಮಗನಾದ ಅಭಿನಂದನ್ ಸಿಎ ಪದವಿ ಮುಗಿಸಿದ್ದು ಅವರನ್ನು ಸನ್ಮಾನಿಸಲಾಯಿತು. ಸಹಕಾರಿಯ ಮುಖ್ಯ ನಿರ್ವಾಹಕರಾದ ಅಂಬಿಕಾ ವಂದಿಸಿದರು.











