ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಇದರ ವಾರ್ಷಿಕ ಮಹಾಸಭೆಯು ಭಾನುವಾರ ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನವನದ ಬಳಿ ಇರುವ “ಸ್ಪರ್ಶಾ ಕಲಾ ಮಂದಿರ”ದಲ್ಲಿ ಸಂಘದ ಅಧ್ಯಕ್ಷರಾದ ಸುರೇಶ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಮಹಾಸಭೆಯಲ್ಲಿ 2025-26ನೇ ಸಾಲಿಗೆ ಶೇ.15ರಂತೆ ಡಿವಿಡೆಂಡ್ ನೀಡಲು ನಿರ್ಧರಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಂಘದಲ್ಲಿ 9,319 ಸದಸ್ಯರಿದ್ದು ಪಾಲು ಬಂಡವಾಳ ರೂ. 8.28 ಕೋಟಿ, ಠೇವಣಾತಿಗಳು ರೂ. 264.07 ಕೋಟಿ, ನಿಧಿಗಳು 22.63 ಕೋಟಿ, ವಿನಿಯೋಗಗಳು 57.84 ಕೋಟಿ, ಸಾಲಗಳು ರೂ. 250.14 ಕೋಟಿ, ವಸೂಲಾತಿ ಶೇಕಡ 95.01 ಆಗಿರುತ್ತದೆ. 2025-26ನೇ ಸಾಲಿನಲ್ಲಿ ರೂ. 1435.15 ಕೋಟಿ ವ್ಯವಹಾರ ನಡೆಸಿ ರೂ. 5.00 ಕೋಟಿ ಲಾಭ ಗಳಿಸಿರುತ್ತದೆ. ಸಂಘದ ದುಡಿಯುವ ಬಂಡವಾಳ ರೂ. 297.71 ಕೋಟಿ ಆಗಿರುತ್ತದೆ. ಆಡಿಟ್ ವರ್ಗೀಕರಣದಲ್ಲಿ ‘ಎ’ ತರಗತಿ ಲಭಿಸಿದೆ.
ಉಪಾಧ್ಯಕ್ಷರಾದ ಜನಾರ್ಧನ ಕುಲಾಲ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಬಿ.ರಮೇಶ್ ಸಾಲ್ಯಾನ್, ಸತೀಶ, ಸುರೇಶ್ ಎನ್., ರಮೇಶ್ ಸಾಲ್ಯಾನ್, ಅರುಣ್ ಕುಮಾರ್, ಭೋಜ ಸಾಲಿಯಾನ್, ಕಿರಣ್ ಕುಮಾರ್ ಎ., ಪ್ರೇಮನಾಥ ಬಂಟ್ವಾಳ್, ಹರೀಶ, ವಿದ್ಯಾ, ಮಾಲತಿ ಮಚೇಂದ್ರ, ಎಂ.ಕೆ ಗಣೇಶ್ ಸಮಗಾರ, ಜಗನ್ನಿವಾಸ ಗೌಡ, ರೇಖಾ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿರ್ದೇಶಕರಾದ ಸತೀಶ ಸ್ವಾಗತಿಸಿದರು, ಮಹಾಸಭೆಯಲ್ಲಿ ವಾರ್ಷಿಕ ವರದಿಯನ್ನು ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿ ಸರ್ವಾನುಮತದಿಂದ ಮಂಜೂರಾತಿ ಪಡೆಯಲಾಯಿತು. ಸದಸ್ಯರ ಪ್ರಶ್ನೆಗಳಿಗೆ ಅಧ್ಯಕ್ಷರು ಸಮಜಾಯಿಷಿಕೆ ನೀಡಿದರು. ಸಂಘದ ಪ್ರಗತಿ ಆಡಳಿತ ಮಂಡಳಿಯ ಯೋಚನೆ ಮತ್ತು ಯೋಜನೆಯನ್ನು ಅಧ್ಯಕ್ಷರು ಸಭೆಯ ಮುಂದಿಟ್ಟು ಸದಸ್ಯರ ಸಲಹೆ ಪಡೆದು ಎಲ್ಲಾ ಸದಸ್ಯರ ಸಹಕಾರ ಕೋರಿದರು. ಸದಸ್ಯರು ಸಲಹೆ ಸೂಚನೆ ನೀಡಿದರು. ನಿರ್ದೇಶಕರಾದ ಕಿರಣ್ ಕುಮಾರ್ ಎ. ವಂದನಾರ್ಪಣೆಯೊAದಿಗೆ ಮಹಾಸಭೆಯನ್ನು ಮುಕ್ತಾಯಗೊಳಿಸಲಾಯಿತು. ಬಳಿಕ ಚೇತನ್ ಕುಶಿ ಹಾಗೂ ಚೈತ್ರ ಕಲ್ಲಡ್ಕ ಮತ್ತು ಸಹಕಾರಿ ಬಂಧುಗಳಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನೆರವೇರಿತು.



