ಬೆಂಗಳೂರು: ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ., ವಿ.ವಿ.ಪುರಂ, ಬೆಂಗಳೂರು ಇದರ 17ನೇ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಸ್ವಾಭಿಮಾನಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬೆಂಗಳೂರಿನ ಸಜ್ಜನರಾವ್ ಸರ್ಕಲ್ ಬಳಿಯ ವಿ.ವಿ.ಪುರಂನ ಶ್ರೀ ಸತ್ಯನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಲಾಯಿತು.
ಸಂಸ್ಥೆಯು ಸದಸ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸಹಕಾರ ತತ್ವದಡಿ ಕಾರ್ಯನಿರ್ವಹಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಸದಸ್ಯರಿಗೆ ನಿರಂತರವಾಗಿ ಡಿವಿಡೆಂಡ್ ನೀಡುತ್ತಿದೆ. ಸಂಸ್ಥೆಯ ವ್ಯವಹಾರವು ರೂ.100 ಕೋಟಿಗೂ ಮೀರಿದ್ದು, 2025–26ನೇ ಸಾಲಿನಲ್ಲಿ ಶೇ.13 ಡಿವಿಡೆಂಡ್ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಹಕಾರ ಕ್ಷೇತ್ರದಲ್ಲಿ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸುತ್ತಿದ್ದು, ಸದಸ್ಯರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿದೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬಿ.ವಿ. ಸದಾನಂದ ರೆಡ್ಡಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಜಿ.ವಿ. ಉಪಸ್ಥಿತರಿದ್ದರು.










