Top News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾವೂರು, ಬೆಳ್ತಂಗಡಿ, ಶಿವಮೊಗ್ಗದಲ್ಲಿ ಶೀಘ್ರ ಎಂ.ಸಿ.ಸಿ ಬ್ಯಾಂಕ್ ನೂತನ ಶಾಖೆ
    Mahasabhe

    ಕಾವೂರು, ಬೆಳ್ತಂಗಡಿ, ಶಿವಮೊಗ್ಗದಲ್ಲಿ ಶೀಘ್ರ ಎಂ.ಸಿ.ಸಿ ಬ್ಯಾಂಕ್ ನೂತನ ಶಾಖೆ

    adminBy adminApril 5, 2024

    ವರದಿ ವರ್ಷದಲ್ಲಿ 13.12 ಕೋಟಿ ರೂ. ಲಾಭ ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ ಮಾ.31ಕ್ಕೆ ಅಂತ್ಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂ. ವ್ಯವಹಾರಿಕ ಲಾಭ ಗಳಿಸಿದೆ. ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯನ್ನ ಇತ್ತೀಚೆಗೆ ತೆರೆಯಲಾಗಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸತತವಾಗಿ ಎನ್.ಪಿ.ಎ. ಪ್ರಮಾಣ ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಥಮ ಬಾರಿ ಶೇ.1.07 ಎನ್.ಪಿ.ಎ. ದಾಖಲಿಸಿದೆ. ಬ್ಯಾಂಕಿನ ವ್ಯವಹಾರ ಡಿಸೆಂಬರ್ ಅಂತ್ಯಕ್ಕೆ 1000 ಕೋಟಿ ರೂ. ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆ ಎಂದು ಅವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಇದಕ್ಕೆ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮವೂ ಕಾರಣ. ಪ್ರಸ್ತುತ ವರ್ಷ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಕರ್ನಾಟಕ ರಾಜ್ಯಾದ್ಯಂತ ವಿಸ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದ್ದು, ಇದು ಮಹತ್ವದ ಸಾಧನೆಯಾಗಿದೆ ಎಂದು ಹೇಳಿದರು.

    2023-24ರ ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿ ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ 62.45 ಕೋಟಿ ರೂ.ನಿಂದ 76.35 ಕೋಟಿ ರೂ.ಗೆ ತಲುಪಿದೆ. ಬ್ಯಾಂಕಿನ ವ್ಯವಹಾರ 1081 ಕೋಟಿ ರೂ. ದಾಟಿದ್ದು ಕಳೆದ ವರ್ಷಕ್ಕಿಂತ ಶೇ.16 ಏರಿಕೆಯಾಗಿದೆ ಎಂದು ಅನಿಲ್ ಲೋಬೊ ಹೇಳಿದರು. ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆಂಡ್ರೂೃ ಡಿಸೋಜ, ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ.ರಾಡ್ರಿಗಸ್, ಡೇವಿಡ್ ಡಿಸೋಜ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೊಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೊಜ, ಆಲ್ವಿನ್ ಪಿ.ಮೊಂತೇರೊ, ಫೆಲಿಕ್ಸ್ ಡಿ ಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾಪ್ರಬಂದಕ ಸುನೀಲ್ ಮಿನೇಜಸ್ ಸುದ್ದಿಗೋಷ್ಠಿಯಲ್ಲಿದ್ದರು. ಬ್ಯಾಂಕ್ ಮೇಲೆ ಸದಸ್ಯರ ವಿಶ್ವಾಸ ಅನಿವಾಸಿ ಭಾರತೀಯರರಿಗೆ (ಎನ್‌ಆರ್‌ಐ) ಸೇವಾ ಸೌಲಭ್ಯ ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಇದಾಗಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ಅನಿಲ್ ಲೋಬೊ ನೇತೃತ್ವದ 14 ಸದಸ್ಯರು 2023-28ರ ವರ್ಷಕ್ಕೆ ಅವಿರೋಧ ಆಯ್ಕೆಯಾಗಿದ್ದು, 2023ರ ಆಗಸ್ಟ್‌ನಲ್ಲಿ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅನಿಲ್ ಲೋಬೊ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಸದಸ್ಯರು ಬ್ಯಾಂಕಿನ ಮೇಲೆ ಹೊಂದಿರುವ ವಿಶ್ವಾಸವೇ ಇದಕ್ಕೆ ಕಾರಣವಾಗಿದೆ.

    Athmashakthi Cooperative Sahakara Spandana Spandana Cooperative
    Previous Articleಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ದಾಖಲೆಯ 546 ಕೋಟಿ ರೂಪಾಯಿ ವ್ಯವಹಾರ.
    Next Article ಮಹಾಲಕ್ಷ್ಮಿ ಬ್ಯಾಂಕ್‌ಗೆ 17.50 ಕೋಟಿ ರೂ. ಲಾಭ . 2023-24ರಲ್ಲಿ 921 ಕೋಟಿ ರೂ. ವ್ಯವಹಾರ

    Related Posts

    News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025
    News

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025
    News

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.