Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಐವನ್ ಡಿಸೋಜ, ಸ್ಟ್ಯಾನಿ, ಉಮರ್‌ಗೆಗೆ ಎಂಸಿಸಿ ಬ್ಯಾಂಕ್ ಗೌರವ ಸನ್ಮಾನ
    News

    ಐವನ್ ಡಿಸೋಜ, ಸ್ಟ್ಯಾನಿ, ಉಮರ್‌ಗೆಗೆ ಎಂಸಿಸಿ ಬ್ಯಾಂಕ್ ಗೌರವ ಸನ್ಮಾನ

    adminBy adminJuly 8, 2024

    ಮಂಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅವರಿಗೆ ಎಂಸಿಸಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು.
    ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸ್ವಾಗತಿಸಿ ಮಾತನಾಡಿ, “ಎಂ.ಸಿ.ಸಿ ಬ್ಯಾಂಕ್ ಸಮಾಜದ ಬಗ್ಗೆ ಹೆಚ್ಚಿನ ಜವಾಬ್ದಾರಿ ಹೊಂದಿದೆ, ಕಳೆದ ಆರು ವರ್ಷಗಳಿಂದ ಸಮಾಜದ ಒಳಿತಿಗಾಗಿ ಬ್ಯಾಂಕ್ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಬ್ಯಾಂಕಿನ ಶತಮಾನೋತ್ಸವದ ನಂತರದ ರಜತ ಮಹೋತ್ಸವದ ಸಂದರ್ಭ ರಾಜ್ಯದಲ್ಲಿ 125 ಶಾಖೆಗಳನ್ನು ಹೊಂದುವ ಆಶಯವಿದೆ” ಎಂದು ಹೇಳಿದರು.


    ಮಾಜಿ ಶಾಸಕ ಜೆ.ಆರ್.ಲೋಬೊ ಅಭಿನಂದನಾ ಭಾಷಣ ಮಾಡಿ, ಸನ್ಮಾನಿತರೊಂದಿಗಿನ ತಮ್ಮ ಸಂಬಂಧವನ್ನು ಸ್ಮರಿಸಿ, ಗಣ್ಯ ವ್ಯಕ್ತಿಗಳಿಗೆ ನೀಡುವ ಸನ್ಮಾನಗಳು ಸಮಾಜದ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದರು.
    ಐವನ್ ಡಿಸೋಜ, ಸ್ಟ್ಯಾನಿ ಅಲ್ವಾರಿಸ್ ಮತ್ತು ಉಮರ್ ಯು.ಎಚ್. ಅವರನ್ನು ಗೌರವಿಸಲಾಯಿತು.
    ಸನ್ಮಾನ ಸ್ವೀಕರಿಸಿ ಮಾತನಾಡಿದ ಐವನ್ ಡಿಸೋಜ, ಬ್ಯಾಂಕಿನ ಸಿಬ್ಬಂದಿಗಳ ಕಠಿಣ ಪರಿಶ್ರಮದಿಂದ ಬ್ಯಾಂಕು ತ್ತಮ ಲಾಭಾಂಶ ಹೊಂದಿದೆ ಎಂದು ಹೇಳಿ ತಮ್ಮನ್ನು ಅಭಿನಂದಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಗೌರವ ಸ್ವೀಕರಿಸಿದ ಸ್ಟ್ಯಾನಿ ಅಲ್ವಾರಿಸ್ ಮತ್ತು ಉಮರ್ ಯು. ಎಚ್. ಗೌರವಕ್ಕೆ ವಂದಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ಬ್ಯಾಂಕಿನ ನಿರ್ದೇಶಕರಾದ ಆಂಡ್ರ್ಯೂ ಡಿಸೋಜ, ಐರಿನ್ ರೆಬೆಲ್ಲೊ, ಅನಿಲ್ ಪತ್ರಾವೊ, ಎಲ್ರಾಯ್ ಕಿರಣ್ ಕ್ರಾಸ್ಟೊ, ಜೆ.ಪಿ. ರೊಡ್ರಿಗಸ್, ರೋಶನ್ ಡಿಸೋಜ, ಡಾ|ಫ್ರೀಡಾ ಡಿಸೋಜ, ಮೆಲ್ವಿನ್ ವಾಸ್, ಹೆರಾಲ್ಡ್ ಮೊಂತೇರೊ, ವಿನ್ಸೆಂಟ್ ಲಸ್ರಾದೊ, ಸುಶಾಂತ್ ಸಲ್ಡಾನ್ಹಾ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶ್ರೀಮತಿ ಶರ್ಮಿಳಾ ಮಿನೇಜಸ್ ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡೇವಿಡ್ ಡಿಸೋಜ ವಂದಿಸಿ, ಮನೋಜ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಧಾನ ವ್ಯವಸ್ಥಾಪಕ ರಾಜ್ ಮಿನೇಜಸ್ ಉಪಸ್ಥಿತರಿದ್ದರು.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
    ಇಮೇಲ್:   sahakaraspandana@gmail.com
    ಮಾಹಿತಿಗೆ ಸಂಪರ್ಕಿಸಿ: 9901319694.

    Anil Lobo Cooperative Ivan Dsouza MCC BANK Sahakara Spandana Spandana Cooperative
    Previous Articleಜುಲೈ 7ಕ್ಕೆ ಹಲಸು ಹಬ್ಬ, ವೈದ್ಯಕೀಯ ಶಿಬಿರ
    Next Article ಸಹಕಾರಿ ಕ್ಷೇತ್ರ ದೇಶದ ಆರ್ಥಿಕತೆಯ ಬಲಶಾಲಿ ಸ್ತಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.