Top News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಕ್ಕಳ ಕಲಿಕೆಗೆ ಎಸ್‌ಸಿಡಿಸಿಸಿ ಬ್ಯಾಂಕ್ ನಿರಂತರ ಪ್ರೋತ್ಸಾಹ: ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿಕೆ
    News

    ಮಕ್ಕಳ ಕಲಿಕೆಗೆ ಎಸ್‌ಸಿಡಿಸಿಸಿ ಬ್ಯಾಂಕ್ ನಿರಂತರ ಪ್ರೋತ್ಸಾಹ: ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿಕೆ

    adminBy adminJuly 20, 2024

     

    ಮಂಗಳೂರು: ಪ್ರತಿಭಾನ್ವಿತ ವಿದ್ಯಾರ್ಥಿಗಳ ಕಲಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರಂತರವಾಗಿ ಪ್ರೋತ್ಸಾಹ ನೀಡುತ್ತಲೇ ಬಂದಿದೆ. ಅವರ ಸಾಧನೆ ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ಪ್ರಯೋಜನವಾಗುತ್ತದೆ. ಇದನ್ನು ಮನಗಂಡು ಎಸ್‌ಸಿಡಿಸಿಸಿ ಬ್ಯಾಂಕ್ 16 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಆಯೋಜಿಸುತ್ತಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

    ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ದಿ.ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಎಸ್‌ಸಿಡಿಸಿಸಿ ಬ್ಯಾಂಕ್ ಅವಿಭಜಿತ ದ.ಕ. ಜಿಲ್ಲೆಯ ಅಬಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಸೂಕ್ತ ಕಾರಣಕ್ಕೆ ಸಾಲ ಒದಗಿಸಲಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಮರು ಪಾವತಿಯಾಗುತ್ತಿದೆ ಎಂದು ತಿಳಿಸಿದರು.

    ಮುಖ್ಯ ಅತಿಥಿ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ.ಯು.ಕೆ.ಮೋನು ಮಾತನಾಡಿ, ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಕಾರಣ ದೇಶ ಇಂದು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಈಗಿನ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಬೇಕಾದ ಸಕಲ ರೀತಿಯ ಸೌಲಭ್ಯಗಳೂ ಸಿಗುತ್ತಿವೆ. ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಸಾರಥ್ಯದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಶಿಕ್ಷಣಕ್ಕೂ ನೆರವು ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

    2023-2024ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಯ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಿಸಲಾಯಿತು.

    ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ ಎಸ್.ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ಎಸ್.ರಾಜು ಪೂಜಾರಿ, ಎಸ್.ಬಿ.ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ , ಜೈರಾಜ್ ಬಿ.ರೈ, ಕುಶಾಲಪ್ಪ ಗೌಡ ಪಿ., ಸದಾಶಿವ ಉಳ್ಳಾಲ್, ಸ್ಕಾೃಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಉಪಸ್ಥಿತರಿದ್ದರು.

    ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿದರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಕಾರ್ಯಕ್ರಮ ನಿರೂಪಿಸಿದರು.

     

    Cooperative Sahakara Spandana SCDCC Bank Spandana Trust St. Alphonsa Souharda Coop Society
    Previous Articleಜುಲೈ 21ರಂದು ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ವಿಂಶತಿ ಸಂಭ್ರಮ ಉದ್ಘಾಟನೆ
    Next Article ಸಹಕಾರಿ ಬ್ಯಾಂಕ್‌ಗಳಿಂದ ಯಶಸ್ವಿ ಸೇವೆ

    Related Posts

    News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025
    News

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025
    News

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.