Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾವೂರು ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ
    News

    ಕಾವೂರು ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

    adminBy adminSeptember 16, 2024

    ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಸ್ತಾಂತರ, ಸದಸ್ಯರಿಗೆ ಶೇ.6 ಡಿವಿಡೆಂಡ್‌

    ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಕಾವೂರು ಇದರ 4ನೇ ವಾರ್ಷಿಕ ಮಹಾಸಭೆ ಕಾವೂರು ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಭಾನುವಾರ ನಡೆಯಿತು.

    ಸಹಕಾರಿಯ ಸದಸ್ಯರಾದ ಪದ್ಮನಾಭ ಕಾರ್ನಾಡು, ಸುಧಾಕರ ಕರ್ಕೇರ, ಕೃಷ್ಣ ಎನ್.ಪೂಜಾರಿ, ಪ್ರಮೀಳಾ ಈಶ್ವರ್ , ಶಿಲ್ಪಾಕುಮಾರಿ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಮಾತನಾಡಿ, ನಾಲ್ಕು ವರ್ಷಗಳಲ್ಲಿ ಕಾವೂರು ಹಾಗೂ ಕೋಡಿಕಲ್‌ನಲ್ಲಿ ಎರಡು ಶಾಖೆಗಳನ್ನು ತೆರೆಯಲಾಗಿದೆ, ಸಹಕಾರಿಯು ಪ್ರತಿ ವರ್ಷದಲ್ಲಿ ಲಾಭದಲ್ಲಿದ್ದು ಈ ವರ್ಷ ರೂ. 3,65,714.70 ಲಾಭ ಗಳಿಸಿ ಸದಸ್ಯರಿಗೆ ಶೇ.6 ಡಿವಿಡೆಂಡ್‌ ಘೋಷಿಸಲಾಗಿದೆ ಎಂದು ತಿಳಿಸಿದರು. ಸಹಕಾರಿಯ ಶಾಖೆಗಳಲ್ಲಿ ಈ ಸ್ಟ್ಯಾಂಪಿಂಗ್‌,  ಆರ್‌ಟಿಜಿಎಸ್, ನೆಫ್ಟ್‌, ಆರ್.ಟಿ.ಸಿ ,ಮಿನಿ ಎಟಿಎಂ ಸೌಲಭ್ಯ ಹಾಗೂ ಕಡಿಮೆ ಬಡ್ಡಿಯಲ್ಲಿ ಚಿನ್ನಾಭರಣ ಸಾಲ ನೀಡಲಾಗುತ್ತಿದ್ದು ಸದಸ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು.

    https://chat.whatsapp.com/Ge11n7QCiMj5QyPvCc0H19

    ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಗಳಿಸಿದ ಎಂಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಯಿತು. 10 ಮಂದಿ ಸದಸ್ಯರಿಗೆ ಕರ್ನಾಟಕ ರಾಜ್ಯ ಸರಕಾರದ ಯಶಸ್ವಿನಿ ಆರೋಗ್ಯ ಕಾರ್ಡ್‌ ನೀಡಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಚನಾ ವಾರ್ಷಿಕ ಲೆಕ್ಕಪತ್ರ , ಲಾಭ ಗಳಿಕೆ ,ನಿವ್ವಳ ಲಾಭ ವಿಂಗಡಣೆಯ ಲೆಕ್ಕವನ್ನು ಸಭೆಯಲ್ಲಿ ಮಂಡಿಸಿದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಬೆಂಗಳೂರು ಇದರ ಮೈಸೂರು ವಿಭಾಗದ  ಪ್ರಾಂತೀಯ ವ್ಯವಸ್ಥಾಪಕ ಗುರುಪ್ರಸಾದ್ ಬಂಗೇರ ಉಪಸ್ಥಿತರಿದ್ದರು. ನಿರ್ದೇಶಕರಾದ ಸದಾಶಿವ ಪೂಜಾರಿ, ಹೇಮಚಂದ್ರ ಹೆಚ್ , ಚಂದ್ರಶೇಖರ್ ಜಿ , ಪುರುಷೋತ್ತಮ್ ಪೂಜಾರಿ, ದಿವಾಕರ್ , ಸದಾಶಿವ, ಕಿಶೋರ್ ಸುವರ್ಣ , ಪೂರ್ಣಿಮಾ ಕೆ ನಾಯ್ಕ್, ಬೋಳೂರು ಧನ್ಯಲತಾ , ಭವ್ಯ ಉಪಸ್ಥಿತರಿದ್ದರು. ನಿರ್ದೇಶಕರಾದ ಪುರುಷೋತ್ತಮ ಎನ್.ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು, ಉಪಾಧ್ಯಕ್ಷ ಸಚ್ಚಿದಾನಂದ ಪೂಜಾರಿ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Chandrashekhar Kumar Cooperative Cooperative Department Cooperative Registrar Sahakara Spandana Shree Gurushakthi Souharda Cooperative Society Spandana Cooperative Spandana Trust
    Previous Articleಸೆ.21ರಂದು ಬಳ್ಳಾರಿಯ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
    Next Article ಆತ್ಮಶಕ್ತಿಯಿಂದ ಜನರ ಆರೋಗ್ಯದ ಕಾಳಜಿ, ಜಾಗೃತಿ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.