Top News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿಯಿಂದ ಜನರ ಆರೋಗ್ಯದ ಕಾಳಜಿ, ಜಾಗೃತಿ
    News

    ಆತ್ಮಶಕ್ತಿಯಿಂದ ಜನರ ಆರೋಗ್ಯದ ಕಾಳಜಿ, ಜಾಗೃತಿ

    adminBy adminSeptember 17, 2024

    ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ ಉದ್ಘಾಟಿಸಿ ಹರೀಶ್‌ ಪಿ.ಡಿ ಅಭಿಪ್ರಾಯ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೧೩ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಪಡೀಲ್ ಬೈರಾಡಿಕೆರೆ ಹತ್ತಿರದ “ಆತ್ಮಶಕ್ತಿ ಸೌಧ”ದಲ್ಲಿ ಜರುಗಿತು.
    ಸಂಘದ ಸದಸ್ಯ ಹರೀಶ್ ಪಿ.ಡಿ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿ ಮೂಡಿಸುವಲ್ಲಿ ಸಫಲತೆ ಕಂಡಿದೆ ಎಂದು ಅಭಿಪ್ರಾಯಪಟ್ಟರು.


    ಶ್ರೀನಿವಾಸ್ ಇನ್‌ಸ್ಟಿಟ್ಯೂಟ್‌ ಆಫ್‌ ಡೆಂಟಲ್ ಸಾಯನ್ಸ್‌ನ ದಂತವೈದ್ಯರಾದ ಡಾ.ಶಿಫಾಲಿ ಸಾಲಿಯಾನ್ ಮಾತನಾಡಿ, ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು ಮುಂತಾದ ಸೇವೆಗಳು ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು.


    ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರ ಏರ್ಪಡಿಸುತ್ತ್ತ ಬಂದಿದ್ದು, ಇದು ಸಂಘದ ೭೩ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಶಿಬಿರವು ಸಂಘದ ಸದಸ್ಯರಿಗೆ ತುಂಬ ಪ್ರಯೋಜನಕಾರಿಯಾಗಿದೆ. ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಇಂತಹ ಆರೋಗ್ಯ ಶಿಬಿರ ಏರ್ಪಡಿಸಲು ಸಹಕರಿಸುತ್ತಿರುವ ಶ್ರೀನಿವಾಸ್ ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆಗಳು. ಹಬ್ಬಗಳ ಪ್ರಯುಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರ ಶೇ. ೧೦.೫ ನ್ನು ನೀಡಲಾಗುತ್ತಿದ್ದು ಹಾಗೂ ಗ್ರಾಹಕರಿಗೆ ಯಾವುದೇ ಸೇವಾ ಶುಲ್ಕವಿಲ್ಲದೇ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್., ಚಂದ್ರಾವತಿ, ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಸಂಘದ ಸದಸ್ಯರಾದ ಸದಾನಂದ ಪೂಜಾರಿ, ಜಗದೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಸಹಾಯಕ ಪ್ರಬಂಧಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Athmashakthi Banking Chitharanjan Bolar Chittaranjan Bolar Co Operative ministry Cooperative Cooperative Registrar Helath Camp Sahakara Spandana Souharda Sahakari Spandana NEws Yuvavahini
    Previous Articleಕಾವೂರು ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ
    Next Article ಬಾಂಧವ್ಯ ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಸಾಮಾನ್ಯ ಸಭೆ

    Related Posts

    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.