Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ
    News

    ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ

    adminBy adminSeptember 21, 2024

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪಂಪ್‌ವೆಲ್‌ನಲ್ಲಿರುವ ಸಭಾಂಗಣದಲ್ಲಿ ಶುಕ್ರವಾರ ಸಂಪನ್ನಗೊಂಡಿತು.

    https://chat.whatsapp.com/Ge11n7QCiMj5QyPvCc0H19

    ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್‌ ಕೊಟ್ಟಾರಿ ಎಚ್‌. ವಾರ್ಷಿಕ ವರದಿ ಮಂಡಿಸಿದರು.

    ಸಭೆಯಲ್ಲಿ ಸದಸ್ಯರ ಅಹವಾಲುಗಳನ್ನು ಸ್ವೀಕರಿಸಲಾಯಿತು. ಒಕ್ಕೂಟದ ವತಿಯಿಂದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಮಾಡುವುದು ಹಾಗೂ ಸಹಕಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಒಂದು ಕೇಂದ್ರಬಿಂದುವಾಗಿ ಸಂಘಟಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು. ಜಿಲ್ಲೆಯ ಎಲ್ಲ ಸೌಹಾರ್ದ ಸಹಕಾರಿ ಸಂಘಗಳ ಸದಸ್ಯತ್ವ ಮಾಡುವುದೆಂದು ತೀರ್ಮಾನಿಸಲಾಯಿತು.

    ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ನಿಕಟಪೂರ್ವ ಅಧ್ಯಕ್ಷ ಎ.ಸುರೇಶ್‌ ರೈ ಮಾರ್ಗದರ್ಶನ ನೀಡಿದರು. ಸಂಯುಕ್ತ ಸಹಕಾರಿಯ ನಿರ್ದೇಶಕಿ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟದ ಸೌಹಾರ್ದ ಸಹಕಾರಿಯ ವೃತ್ತಿಪರ ನಿರ್ದೇಶಕಿ ಭಾರತಿ ಜಿ.ಭಟ್‌ ಸಲಹೆಗಳನ್ನು ನೀಡಿದರು.

     

    ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್‌ ಉಪಸ್ಥಿತರಿದ್ದರು. ಚೇತನ್‌ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ಉಪಾಧ್ಯಕ್ಷ ಸಂಜೀವ ಅಡ್ಯಾರ್‌ ವಂದಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಸದಸ್ಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ನಿರ್ದೇಶಕರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Registrar Dakshina Kannada Jilla Okkuta Souharda Sahakari Spandana Spandana Cooperative Spandana NEws Spandana Trust
    Previous Articleದಿ ಕರಾವಳಿ ಕ್ರೆಡಿಟ್ ಕೋಆಪರೇಟಿವ್‌ ಸೊಸೈಟಿಗೆ 5.51 ಕೋಟಿ ರೂ.ಲಾಭ
    Next Article ನ.25ರಿಂದ ದೆಹಲಿಯಲ್ಲಿ ಜಾಗತಿಕ ಸಹಕಾರ ಸಮ್ಮೇಳನ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.