Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋಆಪರೇಟಿವ್‌ ಸೊಸೈಟಿಗೆ 4.55 ಕೋಟಿ ರೂ. ಲಾಭ
    News

    ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋಆಪರೇಟಿವ್‌ ಸೊಸೈಟಿಗೆ 4.55 ಕೋಟಿ ರೂ. ಲಾಭ

    adminBy adminSeptember 24, 2024

    ಸದಸ್ಯರಿಗೆ ಶೇ.18 ಡಿವಿಡೆಂಡ್‌ ಘೋಷಣೆ: ಸೊಸೈಟಿಯ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಹೇಳಿಕೆ

    ಕಾರ್ಕಳ: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯವ್ಯಾಪ್ತಿ ಹೊಂದಿರುವ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 2023-24ನೇ ಸಾಲಿನಲ್ಲಿ 888. 29 ಕೋಟಿ ರೂ. ವ್ಯವಹಾರ ನಡೆಸಿ, 4.55 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.18 ಡಿವಿಡೆಂಡ್‌ ನೀಡಲು ತೀರ್ಮಾನಿಸಿದೆ ಎಂದು ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಹೇಳಿದರು.


    ಜೋಡುರಸ್ತೆಯಲ್ಲಿಯಲ್ಲಿರುವ ರಾಜಾಪುರ ಸ್ವಾರಸ್ವತ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಭಾನುವಾರ ಜರುಗಿದ ಸೊಸೈಟಿಯ 28ನೇ ವಾರ್ಷಿಕ ಮಹಾಸಭೆಯಲ್ಲಿ 2023-2024ರ ಸಾಲಿನ ವ್ಯವಹಾರದ ಪ್ರಗತಿಯ ಅಂಕಿ ಅಂಶವನ್ನು ನೀಡಿ ಮಾತನಾಡಿದ ರವೀಂದ್ರ ಪ್ರಭು ಅವರು, ಸೊಸೈಟಿಯು ರೂ. 4.59 ಕೋಟಿ ಪಾಲು ಬಂಡವಾಳ, ರೂ. 22. 38 ಕೋಟಿ ರೂ. ಸ್ವಂತ ನಿಧಿ, ರೂ. 183. 22 ಕೋಟಿ ರೂ. ಠೇವಣಿ ಹಾಗೂ 150. 21 ಕೋಟಿ ರೂ. ಹೊರಬಾಕಿ ಸಾಲ ಹೊಂದಿ -ಸರ್ವಾಂಗೀಣ ಅಭಿವೃದ್ಧಿ ಸಾಧಿಸಿದೆ. ಇದಕ್ಕೆ ಸದಸ್ಯರು, ಗ್ರಾಹಕರು ಸಹಕಾರಿ ಸಂಸ್ಥೆಯ ಮೇಲೆ ಇಟ್ಟಿರುವ ವಿಶ್ವಾಸವೇ ಕಾರಣ ಎಂದು ಹೇಳಿದರು.

    https://chat.whatsapp.com/Ge11n7QCiMj5QyPvCc0H19
    ಸೊಸೈಟಿಯ ನಿರ್ದೇಶಕ ಹರೀಶ ನಾಯಕ್ ಸ್ವಾಗತಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ನಾಯಕ್ 2023-2024ನೇ ಸಾಲಿನ ವಾರ್ಷಿಕ ವರದಿ, ಆರ್ಥಿಕ ತಖ್ತೆ ಹಾಗೂ 2024-25ನೇ ಸಾಲಿನ ಅಂದಾಜು ಬಜೆಟ್ ಮಂಡಿಸಿದರು. 2023-2024ನೇ ಸಾಲಿನಲ್ಲಿ ಬಜೆಟ್‌ಗಿಂತ ಹೆಚ್ಚಿಗೆ ಖರ್ಚಾದ ವಿವರಗಳನ್ನು ಮಂಡಿಸಿ ಅನುಮೋದನೆ ಪಡೆಯಲಾಯಿತು.


    ಸೊಸೈಟಿಯ ನಿರ್ದೇಶಕರಾದ ಹರಿಶ್ಚಂದ್ರ ತೆಂಡುಲ್ಕರ್ ಮಾಳ, ಹರೀಶ್ ನಾಯಕ್ ಅಜೆಕಾರು, ರಮಾನಾಥ ನಾಯಕ್ ಕುಕ್ಕುಂದೂರು, ಸದಾನಂದ ಪಾಟ್ಕರ್ ಬಜಗೋಳಿ, ಮಂಜುನಾಥ ಪ್ರಭು ಹೆಬ್ರಿ, ಸಚ್ಚಿದಾನಂದ ಪ್ರಭು ಕಣಂಜಾರು, ವಿಶ್ವನಾಥ ಪಾಟ್ಕರ್ ಬೆಳ್ಳಣ್, ಸುನಿಲ್ ನಾಯಕ್ ಮಟ್ಟಾರು, ರಾಮಕೃಷ್ಣ ತೆಂಡುಲ್ಕರ್ ಹಿರ್ಗಾನ, ಕಲಾವತಿ ಯು. ನಾಯಕ್ ಹಿರ್ಗಾನ, ರಂಜಿತ್ ಕುಮಾರ್ ಪೆರ್ಡೂರು, ದಿನೇಶ್ ನಾಯಕ್ ಹೆರ್ಮುಂಡೆ, ಹರೀಶ್ ಬಿ.ನಾಯಕ್ ಪಳ್ಳಿ, ದೇವೇಂದ್ರ ನಾಯಕ್ ಎಳ್ಳಾರೆ ಉಪಸ್ಥಿತರಿದ್ದರು. ಕೇಂದ್ರ ಕಚೇರಿಯ ವ್ಯವಸ್ಥಾಪಕ ಉದಯ ಪ್ರಭು ವಂದಿಸಿದರು.


    ಸಭೆಯ ಬಳಿಕ ಪ್ರಸಿದ್ಧ ಕಲಾಧರ ಯಕ್ಷಗಾನ ಬಳಗ, ಜಲವಳ್ಳಿ ಇವರಿಂದ ನಾಗಶ್ರೀ ಯಕ್ಷಗಾನ ಜರುಗಿತು. ಈ ಸಂದರ್ಭ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಸದಸ್ಯರಾಗಿ ಆಯ್ಕೆಯಾದ ಜಲವಳ್ಳಿ ವಿದ್ಯಾಧರ ರಾವ್ ಅವರನ್ನು ಅಭಿನಂದಿಸಲಾಯಿತು.

    ಸಾಧಕ ಐವರು ವಿದ್ಯಾರ್ಥಿಗಳಿಗೆ ಸನ್ಮಾನ

    ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಐವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಆಟಗಾರ ದೀಕ್ಷಿತ್ ನಾಯಕ್ ಕಬ್ಯಾಡಿ, ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಬ್ಯಾಂಕ್ ಪಡೆದ ಸಮ್ಯಕ್ ಆರ್.ಪ್ರಭು ಕಾರ್ಕಳ, ವಾಣಿಜ್ಯ ವಿಭಾಗದಲ್ಲಿ 5ನೇ ರ್ಯಾಂಕ್ ಪಡೆದ ಭಕ್ತಿ ಕಾಮತ್ ಎಳ್ಳಾರೆ, ರಾಜೀವ ಗಾಂಧಿ ವಿಶ್ವವಿದ್ಯಾಲಯ ಬೆಂಗಳೂರು ಬಿ.ಪಿ.ಎಚ್. ನಲ್ಲಿ 1ನೇ ರ್ಯಾಂಕ್ ಪಡೆದ ಅಶಿತಾ ನಾಯಕ್ ಎಳ್ಳಾರೆ, 2023ರಲ್ಲಿ ಬಿ.ಕಾಂ ಪದವಿಯಲ್ಲಿ 8ನೇ ರ್ಯಾಂಕ್ ಪಡೆದ ಶ್ರೀನಿಧಿ ನಾಯಕ್ ಮಿಯ್ಯಾರು ಅವರನ್ನು ಸನ್ಮಾನಿಸಲಾಯಿತು. ಕಳೆದ ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಒಟ್ಟು 23 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷರಾದ ನೀರೆ ರವೀಂದ್ರ ನಾಯಕ್ ಅಭಿನಂದನಾ ಭಾಷಣ ಮಾಡಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Registrar Kadari Ravindra Prabhu Rajapura Saraswatha Credit Cooperative Society Sahakara Spandana Souharda Sahakari Spandana Spandana NEws
    Previous Articleದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 46.54 ಲಕ್ಷ ರೂ. ನಿವ್ವಳ ಲಾಭ
    Next Article ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 80.59 ಲಕ್ಷ ರೂ. ಲಾಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.