Top News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವ್ಯಾಪಾರಸ್ಥರಿಗೆ ಆರ್ಥಿಕ ನೆರವು ಒದಗಿಸಲು ಸ್ವರ್ಣ ವಿಲಾಸ್ ಸೌಹಾರ್ದ ಸಹಕಾರಿ ಯಶಸ್ವಿ ಹೆಜ್ಜೆ
    News

    ವ್ಯಾಪಾರಸ್ಥರಿಗೆ ಆರ್ಥಿಕ ನೆರವು ಒದಗಿಸಲು ಸ್ವರ್ಣ ವಿಲಾಸ್ ಸೌಹಾರ್ದ ಸಹಕಾರಿ ಯಶಸ್ವಿ ಹೆಜ್ಜೆ

    adminBy adminSeptember 26, 2024

    ಸರ್ವ ಸದಸ್ಯರ ಮಹಾಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಡಾ.ಅಶೋಕ್‌ವರ್ಧನ್‌ ಹೇಳಿಕೆ

    ಸೊಸೈಟಿಗೆ 61 ಲಕ್ಷ ನಿವ್ವಳ ಲಾಭ

    ಕೆಜಿಎಫ್‌: ವಾಣಿಜ್ಯೋದ್ಯಮವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಸ್ಥರು ಹಾಗೂ ಇತರೆ ವರ್ಗದವರಿಗೆ ಸಣ್ಣ ಪ್ರಮಾಣದ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಸ್ವರ್ಣ ವಿಲಾಸ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದು ಸೊಸೈಟಿಯ ಅಧ್ಯಕ್ಷ ಡಾ.ಅಶೋಕ್‌ವರ್ಧನ್ ತಿಳಿಸಿದರು.

    ಕೆಜಿಎಫ್‌ ನಗರದ ಒಂದನೇ ಅಡ್ಡರಸ್ತೆಯಲ್ಲಿರುವ ವಿಷ್ಣು ಸಮಾಜ ಭವನದಲ್ಲಿ ಹಮ್ಮಿಕೊಂಡಿದ್ದ ಏಳನೇ ವರ್ಷದ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

    https://chat.whatsapp.com/Ge11n7QCiMj5QyPvCc0H19
    61 ಲಕ್ಷ ನಿವ್ವಳ ಲಾಭ : ಕಳೆದ ವರ್ಷ ರೂ.45.60.177 ನಿವ್ವಳ ಲಾಭ ಗಳಿಸಿದ್ದು, ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್‌ ಉತ್ತಮ ರೀತಿಯಲ್ಲಿ ವಸೂಲಾತಿ ಮಾಡಿರುವುದರಿಂದ 61,52,874 ರೂ. ನಿವ್ವಳ ಲಾಭ ಗಳಿಸಿದೆ ಎಂದು ಅಶೋಕ್‌ವರ್ಧನ್‌ ತಿಳಿಸಿದರು.
    ಗ್ರಾಹಕರು 2023-24 ನೇ ಸಾಲಿನ ವರ್ಷಾಂತ್ಯಕ್ಕೆ ರೂ. 21,41,62.500 ಠೇವಣಿ ಇಟ್ಟಿದ್ದು, ಇದರಲ್ಲಿ 17,86,27,463 ರೂ. ಸಾಲ ಮತ್ತು ಮುಂಗಡಗಳನ್ನುನೀಡಿರುವುದಾಗಿ ಸಭೆಯಲ್ಲಿ ತಿಳಿಸಿದರು. ಬ್ಯಾಂಕ್‌ನ ಸರ್ವತೋಮುಖ ಅಭಿವೃದ್ಧಿಗೆ ಉಪಾಧ್ಯಕ್ಷರು, ಎಲ್ಲಾ ನಿರ್ದೇಶಕರು, ಬ್ಯಾಂಕ್‌ನ ಸಿಬ್ಬಂದಿ ವರ್ಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚು ಲಾಭ ಪಡೆಯಲು ಸಾಧ್ಯವಾಯಿತು ಎಂದರು.

    ಬ್ಯಾಂಕ್‌ನ ಸಿಇಒ ಬಸವರಾಜ್ ಮಾತನಾಡಿ, ಏಳು ವರ್ಷಗಳ ಅವಧಿಯಲ್ಲಿ ಸ್ವರ್ಣ ವಿಲಾಸ್ ಸೌಹಾರ್ದ ಪತ್ತಿನ ಶಾಖೆಗಳನ್ನು ಬಂಗಾರಪೇಟೆ ಮತ್ತು ಬೇತಮಂಗಲದಲ್ಲಿ ಪ್ರಾರಂಭಿಸಿದ್ದು, ಈಗಾಗಲೇ ಎರಡು ಬ್ಯಾಂಕ್‌ಗಳಲ್ಲಿ ಉತ್ತಮ ವಹಿವಾಟು ನಡೆಸಲಾಗುತ್ತಿದೆ ಎಂದರು.
    ಬ್ಯಾಂಕ್‌ನ ವಾರ್ಷಿಕ ವರದಿಯನ್ನು ಸಭೆಗೆ ಮಂಡಿಸಿ ಒಪ್ಪಿಗೆ ಪಡೆಯಲಾಯಿತು. ಗ್ರಾಹಕರು ಬ್ಯಾಂಕ್‌ನ ಅಭಿವೃದ್ಧಿ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಬ್ಯಾಂಕ್‌ ಉಪಾಧ್ಯಕ್ಷ ರಮೇಶ್ ಶರ್ಮ 7ನೇ ವಾರ್ಷಿಕೋತ್ಸವದ ಶುಭ ಕೋರಿದರು, ಸಭೆಯಲ್ಲಿ ಆಡಳಿತ ಮಂಡಳಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Cooperative Cooperative Registrar KGF Souharda Sahakari Spandana Spandana NEws Swarna Vilas Souharda Sahakari Sangha Niyamitha
    Previous Articleಸಾಮಾಜಿಕ ಕಾರ್ಯಗಳಿಗೆ ಫಾ.ವಲೇರಿಯನ್ ಮೆಂಡೋನ್ಸ ಪ್ರೇರಣೆ
    Next Article ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಇಳಿಕೆ?

    Related Posts

    News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025
    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.