Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬ್ರಹ್ಮಾವರದ ಸ್ನೇಹಾಲಯಕ್ಕೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕೊಡುಗೆ
    News

    ಬ್ರಹ್ಮಾವರದ ಸ್ನೇಹಾಲಯಕ್ಕೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕೊಡುಗೆ

    adminBy adminSeptember 27, 2024

    ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಸಮಾಜಮುಖಿ ಕಾರ್ಯಕ್ರಮ

    ದಿ.ಫಾ.ವಲೇರಿಯನ್ ಮೆಂಡೋನ್ಸ ಅವರ ಸಾಮಾಜಿಕ ಚಿಂತನೆಯ ಫಲ: ಸೊಸೈಟಿಯ ಸಂಸ್ಥಾಪಕ ಜೀವನ್ ಡಿಸೋಜ

    ಬ್ರಹ್ಮಾವರ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಬ್ರಹ್ಮಾವರದ ಸ್ನೇಹಾಲಯ ಸಂಸ್ಥೆಗೆ ದಿನಸಿ ಸಾಮಗ್ರಿಗಳನ್ನು ಶುಕ್ರವಾರ ವಿತರಿಸಲಾಯಿತು.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಜೀವನ್ ಡಿಸೋಜ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ.ಫಾ.ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಈ ಕಾರ್ಯಕ್ರಮದ ಶ್ರೇಯಸ್ಸು ವಲೇರಿಯನ್ ಮೆಂಡೋನ್ಸ ಇವರಿಗೆ ಅರ್ಪಿಸಲಾಗುವುದು.

    ಮೊದಲು ಪಾಂಬೂರಿನ ಮಾನಸ ಪುನರ್ವಸತಿ ಕೇಂದ್ರದ ವಿಶೇಷ ಚೇತನ ಮಕ್ಕಳೊಂದಿಗೆ ಸಂಭ್ರಮ ಆಚರಿಸಿದ್ದು, ಎರಡನೆಯದಾಗಿ ಉದ್ಯಾವರದ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟ್‌ನಲ್ಲಿ ಆಚರಿಸಿಕೊಂಡು ಶುಕ್ರವಾರ ಇಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

    https://chat.whatsapp.com/Ge11n7QCiMj5QyPvCc0H19
    ಮುಖ್ಯ ಅತಿಥಿ ಸೈಂಟ್ ಮೇರಿಸ್ ಕ್ಯಾಥೆಡ್ರಲ್ ಬ್ರಹ್ಮಾವರ ಇಲ್ಲಿನ ಧರ್ಮಗುರು ಫಾ.ಲಾರೆನ್ಸ್ ಡೇವಿಡ್ ಕ್ರಾಸ್ತ ಮಾತನಾಡಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ದಿ.ವಲೇರಿಯನ್ ಮೆಂಡೋನ್ಸ ನುಡಿದಂತೆ ಸಂಸ್ಥೆ ನಡೆದುಕೊಂಡು ಬರುತ್ತಿದೆ. ಸಂಸ್ಥೆಯು ಅನಾಥರು ಮತ್ತು ಹಿರಿಯರ ಮೇಲೆ ಗೌರವವಿಟ್ಟು ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಕ್ಕೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿ, ಸಂಸ್ಥೆಗೆ ಶುಭ ಹಾರೈಸಿದರು.


    ಸಾಮಾಜಿಕ ಕಾರ್ಯಕರ್ತ, ರೋಟರಿ ಕ್ಲಬ್‌ ಬ್ರಹ್ಮಾವರದ ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಅಂದ್ರಾದೆ ಮಾತನಾಡಿ ನಾಟಕದ ಜೀವನ ನಡೆಸಲು ಅಸಾಧ್ಯ, ಅದು ನಾಟಕವೇ ಹೊರತು ಜೀವನ ಅಲ್ಲ, ನಾವು ಎಲ್ಲರು ಇಲ್ಲಿ ಬಂಧುಗಳು. ಈ ಸಂಸ್ಥೆಯು ಇನ್ನು ಹೆಚ್ಚಿನ ಅನೇಕ ರೀತಿಯಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸೇವೆಯನ್ನು ನೀಡಲಿ ಎಂದು ಶುಭ ಹಾರೈಸಿದರು.


    ಸೆಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿ ಇಲ್ಲಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ಅಶ್ವಿನ್ ರೋಚ್ ಮಾತನಾಡಿ ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಇಲ್ಲಿ ನಮಗೆ ನಾವೇ ಎಲ್ಲ. ನಮ್ಮ ಪಾಲಕರೇ ನಮ್ಮ ಸಂಬಂಧಿಗಳು ನಮ್ಮ ಶುಭ ಹಾರೈಕೆದಾರರು. ಅವರು ನಡೆಸಿದಂತೆ ನಡೆದುಕೊಂಡು ಜೀವನ ಸಾಗಿಸಬೇಕು. ಸಿಟ್ಟು ಕೋಪ ಹಠ ಇದರಿಂದ ಸಂತೋಷ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಕಿವಿಮಾತು ಹೇಳಿದರು.


    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಲೆಕ್ಕ ವ್ಯವಸ್ಥಾಪಕ ಕುಮಾರ್ ಹೆಚ್.ಎನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಸಹಾಯಕಿ ರೇಶ್ಮಾ ಎ.ಕುಮಾರಿ ವಂದಿಸಿದರು. ವಿವಿಯನ್ ಮರ್ವಿನ್ ನೊರೊನ್ಹಾ ಹಾಗೂ ಸ್ನೇಹಾಲಯ ಬ್ರಹ್ಮಾವರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Jeevan Dsouza Sacred Heart Church Kolalagiri Snehalaya Brahmavara Souharda Sahakari Spandana NEws Udupi Syndicate Credit Souharda Co Operative Society Valerian mendonsa
    Previous Articleಶ್ರೀಶಾ ಸೌಹಾರ್ದ ಸೊಸೈಟಿಯಿಂದ ವಾಟರ್ ಪ್ರೂಫ್ ಸ್ಕೂಲ್ ಬ್ಯಾಗ್ ವಿತರಣೆ
    Next Article ಮಂಗಳೂರು ಹದಿನಾರು ಪಟ್ಣ ಮೀನುಗಾರಿಕಾ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘ ಶೇ.20 ಡಿವಿಡೆಂಡ್ ಘೋಷಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.