Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಇಲ್ಲ
    News

    ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಇಲ್ಲ

    adminBy adminOctober 1, 2024

    ಡಿಸೆಂಬರ್‌ 31ರ ತನಕ ಮುಂದುವರಿಕೆ

    ನವದೆಹಲಿ: ಅಕ್ಟೋಬರ್‌ 1ರಿಂದ ಆರಂಭವಾದ ಮೂರನೇ ತ್ರೈಮಾಸಿಕದಲ್ಲಿ ಪಿಪಿಎಫ್‌, ಎನ್‌ಎಸ್‌ಸಿ ಸೇರಿದಂತೆ ಹಲವು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಇರಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಇದರಿಂದ ಎರಡನೇ ತ್ರೈಮಾಸಿಕದಲ್ಲಿ ನಿಗದಿಪಡಿಸಿರುವ ಬಡ್ಡಿ ದರ ಅಕ್ಟೋಬರ್‌ 1ರಿಂದ ಡಿಸೆಂಬರ್‌ 31ರ ತನಕ ಮುಂದುವರಿಯಲಿದೆ.

    https://chat.whatsapp.com/Ge11n7QCiMj5QyPvCc0H19
    ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ನಿಗದಿಪಡಿಸಿರುವ ಬಡ್ಡಿ ದರ ಅಕ್ಟೋಬರ್‌ 1ರಿಂದ ಡಿಸೆಂಬರ್‌ 31ರ ತನಕ ಮುಂದುವರಿಯಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸ್ತುತ ಸುಕನ್ಯಾ ಸಮೃದ್ಧಿಗೆ ಶೇ.8.2, ಪಿಪಿಎಫ್‌ಗೆ ಶೇ.7.1, ಅಂಚೆ ಕಚೇರಿಯ ಉಳಿತಾಯ ಠೇವಣಿಗೆ ಶೇ.4, ಕಿಸಾನ್‌ ವಿಕಾಸ್‌ ಪತ್ರಕ್ಕೆ ಶೇ.7.5, ಎನ್‌ಎಸ್‌ಸಿಗೆ ಶೇ.7.7 ಹಾಗೂ ಮಾಸಿಕ ಉಳಿತಾಯ ಯೋಜನೆಗೆ ಶೇ.7.4 ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ.

    ಹೊಸ ತಲೆಮಾರಿಗೆ ಎಸ್‌ಬಿಐ ಹೊಸ ಯೋಜನೆ
    ಹೊಸ ತಲೆಮಾರಿನ ಜನರಲ್ಲೂ ಠೇವಣಿ ಯೋಜನೆಗಳನ್ನು ಜನಪ್ರಿಯಗೊಳಿಸಲು ಭಾರತೀಯ ಸ್ಟೇಟ್‌ಬ್ಯಾಂಕ್‌ (ಎಸ್‌ಬಿಐ) ತೀರ್ಮಾನಿಸಿದೆ. ಠೇವಣಿ ಸಂಗ್ರಹ ಹೆಚ್ಚಳಕ್ಕೆ ಬೃಹತ್‌ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಹೊಸ ಯೋಜನೆ ರೂಪಿಸಲೂ ಚಿಂತನೆ ನಡೆಸಲಾಗಿದೆ ಎಂದು ಎಸ್‌ಬಿಐ ಅಧ್ಯಕ್ಷ ಚಲ್ಲ ಶ್ರೀನಿವಾಸಲು ಸೆಟ್ಟಿ ತಿಳಿಸಿದ್ದಾರೆ.


    “ನಿಶ್ಚಿತ ಠೇವಣಿ (ಎಫ್‌.ಡಿ) ಮತ್ತು ವ್ಯವಸ್ಥಿತ ಹೂಡಿಕೆ (ಎಸ್‌ಐಪಿ) ಸಂಯೋಜಿತ ಹೊಸ ಯೋಜನೆ ರೂಪಿಸಲು ಸಿದ್ಧತೆ ನಡೆದಿದೆ. ಗ್ರಾಹಕರಿಗೆ ಹಣಕಾಸಿನ ವ್ಯವಹಾರದ ಬಗ್ಗೆ ಹೆಚ್ಚಿನ ತಿಳಿವಳಿಕೆ ಇದೆ. ಇದಕ್ಕೆ ಪೂರಕವಾಗಿ ತಮ್ಮ ಬೇಡಿಕೆಗಳನ್ನು ಕೂಡ ಮಂಡಿಸುತ್ತಾರೆ. ಹಾಗಾಗಿ, ನಾವು ಹೊಸ ಹೂಡಿಕೆಯ ವಿಧಾನ ಅನುಸರಿಸುವತ್ತ ದೃಷ್ಟಿ ಹರಿಸಿದ್ದೇವೆ,” ಎಂದು ಅವರು ವಿವರ ನೀಡಿದ್ದಾರೆ.
    “ಆರ್ಥಿಕ ಸಾಕ್ಷರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಪ್ರಯೋಜನಗಳನ್ನು ನೀಡುವ ಯೋಜನೆಗಳನ್ನು ರೂಪಿಸುತ್ತೇವೆ. ರಿಸ್ಕ್‌ ಹೆಚ್ಚಿರುವ ಯೋಜನೆಗಳನ್ನು ಯಾರೂ ಒಪ್ಪುವುದಿಲ್ಲ. ನಾವು ಒದಗಿಸುವ ಯೋಜನೆಗಳು ಅವರ ಜೇಬನ್ನು ತುಂಬಬೇಕು, ಖಾಲಿ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲರನ್ನೂ ಆಕರ್ಷಿಸುವ ಯೋಜನೆಗಳನ್ನು ರೂಪಿಸುತ್ತಿದ್ದೇವೆ,” ಎಂದು ಚಲ್ಲ ಶ್ರೀನಿವಾಸಲು ಸೆಟ್ಟಿ ಅವರು ಮಾಹಿತಿ ನೀಡಿದ್ದಾರೆ.

    ಅಕ್ಟೋಬರ್-ಡಿಸೆಂಬರ್ 2024 ತ್ರೈಮಾಸಿಕದಲ್ಲಿ ಅಂಚೆ ಕಚೇರಿ ಯೋಜನೆಗಳ ಬಡ್ಡಿ ದರ

    ಯೋಜನೆಗಳು                                                           ಬಡ್ಡಿ (%)
    ಉಳಿತಾಯ ಠೇವಣಿ                                          4
    1 ವರ್ಷ ಅವಧಿಯ ಠೇವಣಿ                              6.9
    2 ವರ್ಷ ಅವಧಿಯ ಠೇವಣಿ                              7
    3 ವರ್ಷ ಅವಧಿಯ ಠೇವಣಿ                              7.1
    5 ವರ್ಷ ಅವಧಿಯ ಠೇವಣಿ                              7.5
    5 ವರ್ಷಗಳ ಆರ್‌ಡಿ                                          6.7
    ಹಿರಿಯ ನಾಗರಿಕರ ಉಳಿತಾಯ ಯೋಜನೆ   8.2
    ಮಾಸಿಕ ಆದಾಯ ಖಾತೆ ಯೋಜನೆ                7.4
    ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ         7.7
    ಸಾರ್ವಜನಿಕ ಭವಿಷ್ಯ ನಿಧಿ ಯೋಜನೆ (ಪಿಪಿಎಫ್‌)  7.1
    ಕಿಸಾನ್‌ ವಿಕಾಸ್‌ ಪತ್ರ                                        7.5 (115 ತಿಂಗಳಲ್ಲಿ ಮೆಚ್ಯುರಿಟಿ)
    ಸುಕನ್ಯಾ ಸಮೃದ್ಧಿ ಯೋಜನೆ                          8.2

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative NSP PPF Quarterly Interest Sahakara Spandana Souharda Sahakari Spandana Spandana NEws Sukanya Samruddhi
    Previous Articleಬ್ಯಾಂಕ್‌, ಸಹಕಾರಿ ಸಂಘಗಳಿಗೆ ಈ ತಿಂಗಳಲ್ಲಿ ಸರಣಿ ರಜೆ
    Next Article ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ದೇಶ ಕಂಡ ಮಹಾ ಮಾನವತಾವಾದಿಗಳು

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.