Top News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ದೇಶ ಕಂಡ ಮಹಾ ಮಾನವತಾವಾದಿಗಳು
    News

    ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ದೇಶ ಕಂಡ ಮಹಾ ಮಾನವತಾವಾದಿಗಳು

    adminBy adminOctober 3, 2024

    ಹಿರೇಕೆರೂರ ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಗೌರವ ಕಾರ್ಯದರ್ಶಿ ಎಸ್‌.ಎಸ್‌.ಪಾಟೀಲ ಅಭಿಮತ

    ಹಿರೇಕೆರೂರು: ಮಹಾತ್ಮ ಗಾಂಧಿ ಈ ದೇಶ ಕಂಡ ಮಹಾನ್ ದೇಶಭಕ್ತ. ಅತ್ಯಂತ ಆತ್ಮಾಭಿಮಾನದ ಶ್ರೇಷ್ಠ ವ್ಯಕ್ತಿತ್ವ ರೂಢಿಸಿಕೊಂಡು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರು ಎಂದು ಹಿರೇಕೆರೂರ ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಗೌರವ ಕಾರ್ಯದರ್ಶಿ ಎಸ್‌.ಎಸ್‌.ಪಾಟೀಲ ಹೇಳಿದರು.
    ಹಿರೇಕೆರೂರ ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ನಡೆಯುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    https://chat.whatsapp.com/Ge11n7QCiMj5QyPvCc0H19
    ಮಹಾತ್ಮ ಗಾಂಧಿಯವರು ಮುಖ್ಯವಾಗಿ ಈ ದೇಶದ ಸಾಮಾಜಿಕ ಅನಿಷ್ಟಗಳನ್ನು ತೊಡೆದುಹಾಕಿ ತುಳಿತಕ್ಕೊಳಗಾದ ದೀನ-ದಲಿತರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತರಬೇಕೆಂಬ ಕನಸು ಕಂಡಿದ್ದರು. ಮಹಾತ್ಮ ಗಾಂಧಿ ಕಂಡ ಗ್ರಾಮ ಸ್ವರಾಜ್ಯ ಕಲ್ಪನೆ ಅದ್ಭುತವಾದದ್ದು ಮತ್ತು ವಿಶ್ವಕ್ಕೆ ಮಾದರಿಯಾದದು. ಲಾಲ್ ಬಹದ್ದೂರ್ ಶಾಸ್ತ್ರಿಯವರು ಭಾರತ ಕಂಡ ಅಪ್ರತಿಮ ಪ್ರಧಾನಿಯಾಗಿ ಈ ದೇಶವನ್ನು ಸದೃಡ, ಸಮರ್ಥ ಭಾರತವನ್ನಾಗಿ ನಿರ್ಮಾಣಗೊಳಿಸಲು ತಮ್ಮನ್ನು ತೊಡಗಿಸಿಕೊಂಡ ಧೀಮಂತ ವ್ಯಕ್ತಿ. ಇಂತಹವರ ಆದರ್ಶ ತತ್ವಗಳು ಮತ್ತು ಅವರ ವ್ಯಕ್ತಿತ್ವ ಭಾರತೀಯರೆಲ್ಲರಿಗೂ ಆದರ್ಶಪ್ರಿಯ, ಅಂತಹ ತತ್ವಗಳನ್ನು ಇಂದಿನ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.


    ಅಧ್ಯಕ್ಷತೆ ವಹಿಸಿದ್ದ ಸಹಕಾರಿಯ ಅಧ್ಯಕ್ಷ ಎಸ್.ಬಿ.ತಿಪ್ಪಣ್ಣನವರ ಮಾತನಾಡಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರು ಮಾಡಿರುವ ಸಾಧನೆಗಳು ಬರೀ ಭಾಷಣಕ್ಕೆ ಸೀಮಿತವಾಗದೇ ಈಗಿನ ಯುವಪೀಳಿಗೆ ಅಂತಹ ದಾರಿಯಲ್ಲಿ ಸಾಗುವಂತಾಗಬೇಕು, ಅವರು ತಮ್ಮ ಸತ್ಯ, ನಿಷ್ಠೆ, ತ್ಯಾಗ, ಬಲಿದಾನಗಳಿಂದ ಜಗತ್ತೇ ನಿಬ್ಬೆರಗಾಗುವಂತೆ ಇನ್ನೊಬ್ಬರಿಗಾಗಿ ತಮ್ಮ ಬದುಕನ್ನು ದಾರೆಯೆರೆದ ಮಹಾನ್ ಚೇತನ. ಅಂತಹ ಮಹಾನ್ ಚೇತನದ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ. ಅವರ ಬದುಕು, ಸ್ವತಂತ್ರ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆ ಇವೆಲ್ಲವನ್ನು ದೇಶಕ್ಕೆ ಧಾರೆಯೆರೆದ ಮಹಾ ಮಾನವತಾವಾದಿ ಅವರು. ಇಂತಹವರ ಬದುಕು ನಮಗೆ ಆದರ್ಶವಾಗಬೇಕು ಎಂದರು.


    ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸರ್ವಧರ್ಮೀಯ ಪಠಣ ಬೋಧಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ವಿ.ಸಿ.ಹೊಗಿಸೊಪ್ಪನವರ, ಸಂಸ್ಥೆಯ ಪ್ರಾಂಶುಪಾಲ ಡಾ.ಎಸ್.ಬಿ.ಚನ್ನಗೌಡ್ರ, ಬಿ.ಪಿ.ಹಳ್ಳೇರ, ಕೆ.ಹೆಚ್.ಮಾವಿನತೋಪ, ಮುಖ್ಯೋಪಾಧ್ಯಾಯ ಆರ್.ಹೆಚ್.ಬೆಟ್ಟಳ್ಳೇರ, ಆರ್.ಹೆಚ್.ಪೂಜಾರ, ಸತೀಶ ಬಣಕಾರ, ಬಿ.ವ್ಹಿ.ಸನ್ನೇರ, ರವಿ ಬಡಳ್ಳೇರ ಹಾಗೂ ಸಂಸ್ಥೆಯ ಶಾಲಾ-ಕಾಲೇಜುಗಳ ಬೋಧಕ-ಬೋಧಕೇತರ ಸಿಬ್ಬಂಧಿ ವರ್ಗದವರು, ವಿದ್ಯಾರ್ಥಿಗಳು, ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಆರ್.ಎಂ.ಕರೇಗೌಡ್ರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಪಿ.ಎಂ.ಡಮ್ಮಳ್ಳಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Hirekerura Thaluka Vidyavardhaka Souharda Sahakari Sangha Lal Bahadur Shastry Mahatma Gandhi S B Thippannanavar S S Pateela Souharda Sahakari Spandana NEws
    Previous Articleಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಇಲ್ಲ
    Next Article ಸಹಕಾರ ಕ್ಷೇತ್ರವೇ ಮುಂದಿನ ಕೈಗಾರಿಕಾ ಕ್ರಾಂತಿ

    Related Posts

    News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025
    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.