Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಬೃಹತ್ ವೈದ್ಯಕೀಯ ಶಿಬಿರ
    News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಬೃಹತ್ ವೈದ್ಯಕೀಯ ಶಿಬಿರ

    adminBy adminOctober 7, 2024

    ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಭಾನುವಾರ ತಲಪಾಡಿಯ ಬಂಟರ ಸಂಘ ಹಾಗೂ ಶ್ರೀರಾಮ ಭಜನಾ ಮಂದಿರ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ, ಇವುಗಳ ಸಹಕಾರದೊಂದಿಗೆ ತಲಪಾಡಿಯ ಬಂಟರ ಚಾವಡಿ ಸಭಾಭವನದಲ್ಲಿ “ಬೃಹತ್ ಉಚಿತ ಆರೋಗ್ಯ – ಕಣ್ಣಿನ ತಪಾಸಣಾ ಶಿಬಿರ” ಆಯೋಜಿಸಲಾಯಿತು.

    https://chat.whatsapp.com/Ge11n7QCiMj5QyPvCc0H19
    ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. 250ಕ್ಕೂ ಅಧಿಕ ಜನ ಶಿಬಿರದ ಸದುಪಯೋಗ ಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದ 48 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕಗಳನ್ನು ನೀಡಲಾಯಿತು. ಖಾಯಿಲೆಗಳಿಗೆ ಔಷಧ ಉಚಿತವಾಗಿ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯುಳ್ಳವರಿಗೆ ಬುಧವಾರ ಕೆಎಂಸಿ ಅತ್ತಾವರ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಆಸ್ಪತ್ರೆಗೆ ಹೋಗಿ – ಬರಲು ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಅನೇಕರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯ ಆವಶ್ಯಕತೆಯಿದ್ದು ಅವರಿಗೆ ಸಂಪೂರ್ಣ ಉಚಿತವಾಗಿ ಶಸ್ತ್ರಚಿಕತ್ಸೆ ಮಾಡಲಾಗುತ್ತದೆ.


    ಶ್ರೀಶಾ ಸೊಸೈಟಿಯು ಪ್ರತಿ ತಿಂಗಳೂ ಮಂಗಳೂರು ತಾಲೂಕಿನಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತಿದೆ. ಈ ಶಿಬಿರವು 23ನೇ ಶಿಬಿರವಾಗಿತ್ತು. ಶಿಬಿರವನ್ನು ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಉದ್ಘಾಟಿಸಿದರು. ಸೊಸೈಟಿಯ ನಿರ್ದೇಶಕ ಐ.ಪ್ರಸನ್ನ ಕುಮಾರ ಶ್ರೀಶಾ ಸೊಸೈಟಿಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಶಾ ಸೊಸೈಟಿಯ ನಿರ್ದೇಶಕ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರದ ಸಂಚಾಲಕ ಸುರೇಶ್ ಬೈಂದೂರ್ ಶಿಬಿರದ ನೇತೃತ್ವ ವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Health Camp M S Gururaj Shree Satyasai Balaviksasa Kendra Shreesha Souharda Co Operative Society Souharda Sahakari Spandana NEws Spandana Trust Suresh Byndoor Thalapady Bunatara Sangha
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವದಲ್ಲಿ ದಾಸವರೇಣ್ಯ ವಿಜಯದಾಸರು ಚಲನಚಿತ್ರ ಉಚಿತ ಪ್ರದರ್ಶನ
    Next Article ಹತ್ತಿ ಬೆಳೆ ಉತ್ಪಾದನೆಯಲ್ಲಿ ಭಾರತ ವಿಶ್ವ ನಂಬರ್‌ -2

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.