Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಮಹಾಸಭೆ
    News

    ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಮಹಾಸಭೆ

    adminBy adminOctober 9, 2024

    ಮಂಗಳೂರು: ಯಕ್ಷಧ್ರುವ ಖ್ಯಾತಿಯ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆಯ ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ಕಾವೂರಿನಲ್ಲಿ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಸಂಘವು ವರ್ಷಾಂತ್ಯಕ್ಕೆ ಎ ದರ್ಜೆಯ ಸದಸ್ಯತ್ವ ಪಾಲು ಬಂಡವಾಳ 46.30 ಲಕ್ಷ ರೂ. ಹೊಂದಿದ್ದು, ಠೇವಣಿ ಸಂಗ್ರಹ 4.54 ಕೋಟಿ ರೂ., 4.56 ಕೋಟಿ ರೂ. ವಿವಿಧ ರೀತಿಯ ಸಾಲ ವಿತರಿಸಲಾಗಿದೆ. 1.17 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರ ಠೇವಣಾತಿಗಳಿಗೆ ಅತ್ಯಾಕರ್ಷಕ ಬಡ್ಡಿ ನೀಡುವುದರೊಂದಿಗೆ ಹಿರಿಯ ನಾಗರಿಕರಿಗೆ ವಿಶೇಷ ರೀತಿಯ ಬಡ್ಡಿ ನೀಡಲಾಗುತ್ತಿದೆ. ಚಿನ್ನಾಭರಣ ಈಡಿನ ಸಾಲ, ಗೃಹ ಸಾಲ, ಅಡವು ಸಾಲ, ಜಾಮೀನು ಸಾಲ, ಭದ್ರತಾ ಸಾಲ, ಎಲ್ಲ ತರಹದ ವಾಹನ ಸಾಲ ನೀಡಲಾಗುತ್ತಿದೆ. 2024-25ನೇ ಸಾಲಿಗೆ ಅಂದಾಜು 10 ಕೋಟಿ ರೂ. ಠೇವಣಿ ಸಂಗ್ರಹ ಮತ್ತು ಸಾಲ ವಿತರಣೆ 8.50 ಕೋಟಿ ರೂ. ನಿವ್ವಳ ಲಾಭ 12.74 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು, ಮಂಗಳೂರು ನಗರದ ಪಂಪ್‌ವೆಲ್‌ ಪ್ರದೇಶದಲ್ಲಿ ನೂತನ ಶಾಖೆ ಶೀಘ್ರ ದಲ್ಲೇ ಕಾರ್ಯಾರಂಭ ಆಗಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.


    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಸೊಸೈಟಿ ನಿರ್ದೇಶಕ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಪಟ್ಲ ಸತೀಶ್ ಶೆಟ್ಟಿ ಯಕ್ಷಗಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವ ಕೆಲಸ ಮಾಡಿರುವುದಲ್ಲದೇ ಇತ್ತೀಚೆಗೆ ಅಮೆರಿಕ ಪ್ರವಾಸ ಸಂದರ್ಭ 2 ರಾಜ್ಯಗಳ ಮೇಯರ್ ಅವರು ಯಕ್ಷಧ್ರುವ ದಿನವನ್ನು ಆಚರಿಸುವ ಘೋಷಣೆ ಮಾಡಿರುವುದು ನಮ್ಮ ತುಳುನಾಡಿನ ಯಕ್ಷಗಾನಕ್ಕೆ ಸಂದ ಗೌರವ. ಸಹಕಾರ ಕ್ಷೇತ್ರದಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಸಮಾಜಕ್ಕೆ ಸಹಕರಿಸುವುದು ಶ್ಲಾಘನೀಯ ಕೆಲಸವೆಂದು ಪರಿಗಣಿಸಿ ಅವರನ್ನು ಒಕ್ಕೂಟದ ವತಿಯಿಂದ ಸಮ್ಮಾನಿಸಿದರು.
    ಸೊಸೈಟಿಯ ನಿರ್ದೇಶಕ ಸವಣೂರು ಸೀತಾರಾಮ ರೈ ಸ್ವಾಗತಿಸಿದರು. ಸಿಇಒ ತನುಜಾ ಜೆ.ಅಡ್ಯಂತಾಯ ವಾರ್ಷಿಕ ವರದಿ, ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕ ನಿಟ್ಟೆಗುತ್ತು ರವಿರಾಜ ಶೆಟ್ಟಿ ಸುಧಾಕರ ಎಸ್.ಪೂಂಜ, ಸಂತೋಷ್ ಕುಮಾರ್ ಶೆಟ್ಟಿ, ಲೋಕೇಶ್ ಪೂಜಾರಿ ಭರಣಿ, ರವಿಚಂದ್ರ ಶೆಟ್ಟಿ, ಆರತಿ ಆಳ್ವ ನಿರ್ಮಿತಾ ಶೆಟ್ಟಿ ಉಪಸ್ಥಿತರಿದ್ದರು. ಉಪಾಧ್ಯಕ್ಷ ಅಡ್ಯಾರ್‌ ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಗಿರೀಶ್ ಎಂ.ಶೆಟ್ಟಿ ಕಟೀಲು ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Aikala Harish Shetty Banking Cooperative Patla Sathish Shetty Purushottam Bhandary Adyar Savanuru Seetharam Rai Souharda Sahakari Spandana NEws Yakshadhruva Patla Foundation
    Previous Articleಮಹಾರಾಷ್ಟ್ರದಲ್ಲಿ ಸಹಕಾರ ಸಂಘಗಳ ಚುನಾವಣೆ ಮತ್ತೆ ಮುಂದೂಡಿಕೆ
    Next Article ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ 10ನೇ ಶಾಖೆ ಗ್ರಾಮಚಾವಡಿಯಲ್ಲಿ ಆರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.