Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶೇಷ ಠೇವಣಿ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ರೂ. ಸಂಗ್ರಹ
    News

    ವಿಶೇಷ ಠೇವಣಿ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ರೂ. ಸಂಗ್ರಹ

    adminBy adminOctober 18, 2024

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಯೋಜನೆ ಅದ್ಭುತ ಸ್ಪಂದನೆ

    ಕಾರ್ಕಳ: ವರಮಹಾಲಕ್ಷ್ಮಿ ಹಬ್ಬ ಹಾಗೂ ಗಣೇಶ ಚತುರ್ಥಿ ಅಂಗವಾಗಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ವಿಶೇಷ ಠೇವಣಿ ಯೋಜನೆ ಹಮ್ಮಿಕೊಂಡಿದ್ದ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಯೋಜನೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಂಘವು ಒಂದೇ ತಿಂಗಳಲ್ಲಿ 2.76 ಕೋಟಿ ರೂ. ಸಂಗ್ರಹ ಮಾಡಿದೆ.

    https://chat.whatsapp.com/Ge11n7QCiMj5QyPvCc0H19
    ಇಲ್ಲಿನ ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿ ಹೊಂದಿ, ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘವು 2001 ರಲ್ಲಿ ಆರಂಭವಾಗಿದ್ದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಸಂಘದ ಮೇಲೆ ಗ್ರಾಹಕರು ವಿಶೇಷ ವಿಶ್ವಾಸ ಇರಿಸಿರುವುದರಿಂದ ಪ್ರತಿವರ್ಷವೂ ಠೇವಣಿಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.


    ಸಂಘವು 2023-24ನೇ ಆರ್ಥಿಕ ವರ್ಷದಲ್ಲಿ ರೂ. 147 ಕೋಟಿ ವ್ಯವಹಾರ ನಡೆಸಿ ರೂ. 55.46 ಲಕ್ಷ ನಿವ್ವಳ ಲಾಭ ಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.30.55 ಲಕ್ಷ ಪಾಲು ಬಂಡವಾಳ ಹೊಂದಿದ್ದು ರೂ. 29.57 ಕೋಟಿ ಠೇವಣಿ ಸಂಗ್ರಹವಾಗಿದ್ದು ರೂ. 25.57 ಕೋಟಿ ಸಾಲ ವಿತರಿಸಿದ್ದು ರೂ. 34.63 ಕೋಟಿ ದುಡಿಮೆ ಬಂಡವಾಳ ಹೊಂದಿದೆ.
    ಸಂಘದಲ್ಲಿ ಸಂಚಯ ಠೇವಣಿ, ನಿರಖು ಠೇವಣಿ, ಮಾಸಿಕ ಠೇವಣಿ, ಭಾರತ್ ವಿಕಾಸ್ ಪತ್ರ, ಚಾಲ್ತಿ ಠೇವಣಿ, ಹನಿದೈನಿಕ್ ಠೇವಣಿ ಇದ್ದು, ಠೇವಣಿದಾರರಿಗೆ ಉತ್ತಮ ಬಡ್ಡಿ ನೀಡಲಾಗುತ್ತಿದೆ. ಸಂಘದ ಕೇಂದ್ರ ಕಚೇರಿಯಲ್ಲಿ ಸೇಫ್ ಲಾಕರ್ ಸೌಲಭ್ಯ ಇದೆ.


    ಸಂಘವು ಸದಸ್ಯರಿಗೆ ಆಸ್ತಿ ಅಡಮಾನ ಸಾಲ, ಚಿನ್ನಾಭರಣ ಸಾಲ, ಇತರ ಉದ್ದೇಶ ಸಾಲ, ವಾಹನ ಸಾಲ, ತುರ್ತು ಸಾಲ, ಭದ್ರತಾ ಸಾಲ, ಠೇವಣಾತಿ ಸಾಲ, ಹನಿದೈನಿಕ ಸಾಲ, ಓವರ್ ಡ್ರಾಫ್ಟ್ ಸಾಲ, ಜಾಮೀನು ಸಾಲ, ಗೃಹ ಸಾಲ, ಗ್ರೂಪ್ ಸಾಲಗಳ ಮೂಲಕ ಸಂಘದ ಸದಸ್ಯರಿಗೆ ಆರ್ಥಿಕ ಪ್ರೋತ್ಸಾಹ ನೀಡುತ್ತಾ ಬಂದಿದೆ.


    ಸಂಘವು 1 ತಿಂಗಳ ಅವಧಿಯಲ್ಲಿ ಹಮ್ಮಿಕೊಂಡಿರುವ ವಿಶೇಷ ಠೇವಣಿಗೆ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ. ಸಂಘದ ಮೇಲೆ ವಿಶ್ವಾಸ ಇರಿಸಿ ಅತೀ ಹೆಚ್ಚಿನ ಠೇವಣಿ ನೀಡಿದ ಠೇವಣಿದಾರರಿಗೆ ಕೃತಜ್ಞತೆಗಳು. ಸಂಘದ ಮೂಲಕ ಜನರಿಗೆ ಉತ್ತಮ ಸೇವೆ ನೀಡಲಾಗುವುದು, ಇನ್ನಷ್ಟು ಜನರು ಸಂಘದಲ್ಲಿ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ಸಂಘದ ಅಭಿವೃದ್ದಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷ ಸಂತೋಷ್ ರಾವ್ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Sahakara Spandana Santhosh Rao Shree Durgaparameshwari Vividhoddesha Sahakara Sangha Souharda Sahakari Spandana Cooperative Spandana NEws Spandana Trust
    Previous Articleಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
    Next Article ನವಂಬರ್‌ 2ರಂದು ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ ಮೂರನೇ ಶಾಖೆ ಮಂಗಳಪದವಿನಲ್ಲಿ ಆರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.