Top News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಜ್ಯದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಇಲ್ಲ
    News

    ರಾಜ್ಯದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಇಲ್ಲ

    adminBy adminOctober 23, 2024

    ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ್ ಸ್ಪಷ್ಟನೆ

    ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ನೋಂದಣಿ ಮತ್ತು ಮುದ್ರಾಂಕಗಳ ಆಯುಕ್ತ ಕೆ.ಎ. ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.
    ನೋಂದಣಿ ಕಾಯ್ದೆ 1908ರ ನಿಯಮ 22B ತಿದ್ದುಪಡಿ ವಿರೋಧಿಸಿ ಸೋಮವಾರ ರಾಜ್ಯದ ಐದಾರು ಉಪ ನೋಂದಣಾಧಿಕಾರಿಗಳು ಕೆಲಕಾಲ ನೋಂದಣಿಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದರು. ಅವರೊಂದಿಗೆ ಉನ್ನತ ಮಟ್ಟದ ಇಲಾಖೆಯ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಪ್ರತಿಭಟನೆಗೆ ಮುಂದಾದವರ ಮನವೊಲಿಸಲಾಗಿದ್ದು, ನೋಂದಣಿ ಕಾರ್ಯ ಎಂದಿನಂತೆ ಮುಂದುವರಿಸಲು ಕ್ರಮ ವಹಿಸಲಾಗಿದೆ ಎಂದು ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಈಗ ನೋಂದಣಿ ಮಾಡಿಸಿಕೊಳ್ಳಲು ಯಾವುದೇ ಸಮಸ್ಯೆ ಇಲ್ಲ. ಯಾರು ಬೇಕಾದರೂ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ರಾಜ್ಯದ ಉಪನೋಂದಣಿ ಕಚೇರಿಗಳಲ್ಲಿ ಸ್ಥಿರಾಸ್ತಿ ನೋಂದಣಿಗೆ ಡಿಜಿಟಲ್ ಖಾತಾ ಕಡ್ಡಾಯಗೊಳಿಸಿದ್ದರಿಂದ ಜನರಿಗೆ ಸಮಸ್ಯೆ ಎದುರಾಗಿತ್ತು. ಅಧಿನಿಯಮ ಜಾರಿಗೆ ತಂದ ಬಳಿಕ ರಿಜಿಸ್ಟ್ರೇಷನ್‌ ಪಡೆಯಬೇಕಾದ ದಾಖಲೆಗಳ ಅಸ್ಪಷ್ಟತೆಯಿಂದ ಸಬ್‌ರಿಜಿಸ್ಟ್ರಾರ್ ದಸ್ತಾವೇಜು ನೋಂದಣಿ ಸೇವೆಯನ್ನೇ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ.


    ಈಗಾಗಲೇ ಬಹುತೇಕ ಕಡೆ ಹೊಸ ನೋಂದಣಿ ನಡೆದಿಲ್ಲ. ಕಾವೇರಿ 2.0ರಲ್ಲಿ ಅರ್ಜಿ ಸ್ವೀಕರಿಸಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪಡೆದಿದ್ದ ದಸ್ತಾವೇಜುಗಳ ನೋಂದಣಿ ಮಾಡಲಾಗಿದೆ. ಪ್ರತಿದಿನ 10 ಸಾವಿರ ರಿಜಿಸ್ಟ್ರೇಷನ್ ನಡೆಯುತ್ತಿದ್ದ ಕಡೆ ಸೋಮವಾರ 6,120 ಮತ್ತು ಮಂಗಳವಾರ 2,036 ದಸ್ತಾವೇಜುಗಳಷ್ಟೇ ನೋಂದಣಿ ಆಗಿವೆ. ಮುಂದೆ ಹೊಸ ದಸ್ತಾವೇಜು ಸ್ವೀಕರಿಸದೆ ಇರಲು ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖಾ ನೌಕರರ ಸಂಘ ನಿರ್ಧರಿಸಿದೆ. ಈ ವಿಷಯದಲ್ಲಿ ಕಂದಾಯ ಇಲಾಖೆಯ (ನೋಂದಣಿ ಮತ್ತು ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಯಾವ ನೋಂದಣಿಗೆ ಯಾವ ದಾಖಲೆ ಪಡೆಯಬೇಕೆಂದು ಮಾರ್ಗಸೂಚಿ ಹೊರಡಿಸಬೇಕೆಂದು ಮನವಿ ಸಲ್ಲಿಸಲಾಗಿದ್ದು ಅನಿರ್ದಿಷ್ಠಾವಧಿವರೆಗೂ ರಿಜಿಸ್ಟ್ರೇಷನ್ ನಿಲ್ಲಿಸಲು ಸಂಘ ನಿರ್ಧರಿಸಿದೆ ಎನ್ನಲಾಗಿದೆ.


    ಕೇಂದ್ರ ನೋಂದಣಿ ಕಾಯ್ದೆ 1908ರ ಕರ್ನಾಟಕ ನೋಂದಣಿ ನಿಯಮಾವಳಿ 1965ರ 22 22-ಸಿ ಮತ್ತು 22-ಡಿಗೆ ತಿದ್ದುಪಡಿ ತರಲಾಗುತ್ತಿದೆ. ಕಾಯ್ದೆ 22ಬಿ ಪ್ರಕಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಕಾಯ್ದೆಗೆ ವಿರುದ್ಧವಾಗಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಶದಲ್ಲಿನ ಸ್ಥಿರಾಸ್ತಿ ನೋಂದಣಿ ಮಾಡಿದರೆ ಜಿಲ್ಲಾ ನೋಂದಣಾಧಿಕಾರಿ ಅದನ್ನು ರದ್ದುಪಡಿಸುವ ಅಧಿಕಾರ ನೀಡಲಾಗಿದೆ. ಕಾಯ್ದೆ-81ಎ ಪ್ರಕಾರ ದಸ್ತಾವೇಜು ನೋಂದಣಿ ಮಾಡಿದ ಸಬ್‌ರಿಜಿಸ್ಟ್ರಾರ್‌ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ನೀಡಲಾಗಿದೆ. ಇದು ಸಬ್‌ರಿಜಿಸ್ಟ್ರಾರ್‌ಗಳಲ್ಲಿ ಗೊಂದಲ ಮತ್ತು ಆತಂಕಕ್ಕೆ ಕಾರಣವಾಗಿದೆ.

    ಮಾರ್ಗಸೂಚಿ ನಿರೀಕ್ಷೆಯಲ್ಲಿ ಉಪ ನೋಂದಣಾಧಿಕಾರಿಗಳು
    ಮ್ಯುಟೇಷನ್, ಭೂಮಿ ಮಾಲೀಕತ್ವದ ಸರ್ಟಿಫಿಕೆಟ್, ಗ್ರಾಮದ ನಕ್ಷೆ, ಕಂದಾಯ ನಕ್ಷೆ, ಅನುಮೋದಿತ ಬಡಾವಣೆಗೆ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರ, ಆಕಾರಬಂದ್ ಮತ್ತು ಸರ್ವೇ ದಾಖಲೆ, ಪಿಟಿಸಿಎಲ್ ಕಾಯ್ದೆಗೆ ಒಳಪಡುವುದಿಲ್ಲ ಎಂಬ ನಿರಾಕ್ಷೇಪಣಾ ಪತ್ರ, ಭೂ ಹಿಡುವಳಿದಾರರ ನಿರಾಕ್ಷೇಪಣಾ ಪತ್ರ ಭೂಮಿ ವಿಭಾಗ ಸಂಬಂಧ ನಕ್ಷೆ, ಭೂ ಪರಿವರ್ತನೆ ಆದೇಶ, ತೆರಿಗೆ ಪಾವತಿ ರಸೀದಿ, 1960ರಿಂದ ಇಲ್ಲಿಯವರೆಗೂ ಪಹಣಿ, ಸೈಟ್ ಅಭಿವೃದ್ಧಿ ಶುಲ್ಕದ ರಸೀದಿ, ವಂಶವೃಕ್ಷ ಮತ್ತು ಕುಟುಂಬ ಸದಸ್ಯರು ಮರಣ ಹೊಂದಿದ್ದರೆ ಮರಣ ಪ್ರಮಾಣ ಪತ್ರ… ಇಷ್ಟೆಲ್ಲಾ ದಾಖಲೆಗಳನ್ನು ಕಡ್ಡಾಯಗೊಳಿಸುವ ಸಾಧ್ಯತೆ ಇದೆ.

    ಮದ್ರಾಸ್‌ ಹೈಕೋರ್ಟ್‌ನಲ್ಲಿ ರದ್ದು
    ಕೇಂದ್ರ ನೋಂದಣಿ ಕಾಯ್ದೆ 1908ಕ್ಕೆ 2021ರಲ್ಲಿ ತಮಿಳುನಾಡು ಸರ್ಕಾರ ತಿದ್ದುಪಡಿ ತಂದು ಜಾರಿಗೆ ತಂದಿತ್ತು. ಇದೇ ಮಾದರಿ ರಾಜ್ಯದಲ್ಲೂ ಜಾರಿಗೆ ತರಲಾಗಿದೆ. ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ನಲ್ಲಿ 200 ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಈ ತಿದ್ದುಪಡಿಯು ನ್ಯಾಯಾಂಗಕ್ಕೆ ಸಮಾನಾಂತರ ವೇದಿಕೆ ರಚಿಸಲು ಪ್ರಯತ್ನಿಸಿದೆ. ಕಾರ್ಯಾಂಗಕ್ಕೆ ಅನಗತ್ಯ ಅಧಿಕಾರ ನೀಡಿದೆ ಎಂಬ ಅಭಿಪ್ರಾಯಪಟ್ಟು ತಿದ್ದುಪಡಿಯನ್ನು ಸಂವಿಧಾನ ವಿರೋಧಿ ಎಂದು ತೀರ್ಪು ನೀಡಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Commissioner of Registration and Stamps Digital Khata K A Dayanand Madras High court Mutation Sub Registrar
    Previous Articleಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಪ್ರಣವ ಸೌಹಾರ್ದದ ಅಧ್ಯಕ್ಷ ಜಿ.ಆರ್ ಪ್ರಸಾದ್ ಆಯ್ಕೆ
    Next Article ಅಂತಾರಾಷ್ಟ್ರೀಯ ಸಹಕಾರ ವರ್ಷದ ಲೋಗೋ ಅನಾವರಣ

    Related Posts

    News

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025
    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    June 3, 2025

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.