Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಿಂದ ವೈದ್ಯಕೀಯ ಉಚಿತ ಶಿಬಿರ
    News

    ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಿಂದ ವೈದ್ಯಕೀಯ ಉಚಿತ ಶಿಬಿರ

    adminBy adminNovember 20, 2024

    ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಾವೂರು ಇದರ ಕೋಡಿಕಲ್ ಶಾಖೆ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಮಂದಿರ ಕೋಡಿಕಲ್ ಹಾಗೂ ಗಿರಿಜಾ ಸರ್ಜಿಕಲ್ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕೋಡಿಕಲ್ ಶಾಖೆಯ ಆವರಣದಲ್ಲಿ ಇತ್ತೀಚೆಗೆ ನಡೆಸಲಾಯಿತು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುರುಅಂಬಾ ದೇವಸ್ಥಾನದ ಮುಖ್ಯ ಅರ್ಚಕ ರವೀಶ ರಾವ್‌ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಎಸ್.ಎನ್.ಡಿ.ಪಿ ಸಂಘ ಕೋಡಿಕಲ್ ಇದರ ಅಧ್ಯಕ್ಷ ಪದ್ಮನಾಭ ಕಾರ್ನಾಡ್, ಗಿರಿಜಾ ಸರ್ಜಿಕಲ್ ಪಾಲುದಾರರಾದ ಹರೀಶ್ ಕುಮಾರ್ ಯು, ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್‌, ಕೆಸಿ ಎಂಟರ್‌ಪ್ರೈಸರ್ಸ್‌ ಮಾಲೀಕ ಕೆ.ಚೆನ್ನಯ್ಯ , ಎಸ್.ಎನ್.ಡಿ.ಪಿ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ದಯಾಮಣಿ ವಿಜಯ, ವಕೀಲ ವಿನೋಧರ ಪೂಜಾರಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದಿಂದ ಜನಸಾಮಾನ್ಯರಿಗೆ ಉಪಕಾರವಾಗಿದೆ. ಸಾಮಾಜಿಕ ಆರೋಗ್ಯಕ್ಕೆ ವಿಶೇಷ ಕೊಡುಗೆ ಕೂಡ ನೀಡಿದೆ. ಸಾಮಾಜಿಕ ಸೇವೆಯು ಸಹಕಾರಿಯ ಮಹತ್ವದ ಭಾಗವೆಂದು ಪ್ರೇರೇಪಿಸಿ ಇಂತಹ ಪ್ರಯತ್ನಗಳು ಸಾಮಾಜಿಕ ಬದ್ಧತೆಯ ಪ್ರತೀಕವಾಗಿದ್ದು, ಸಹಕಾರಿಯ ಉಜ್ವಲ ಭವಿಷ್ಯ ರೂಪಿಸಲು ಪೂರಕವಾಗಲಿದೆ. ಇಂಥ ಚಟುವಟಿಕೆಗಳು ಸಹಕಾರಿಯ ಸಮಾಜಮುಖಿ ಹಾದಿಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಗಣ್ಯರು ಶುಭ ಹಾರೈಸಿದರು.


    ಎಸ್.ಎನ್.ಡಿ.ಪಿ ಸಂಘದ ಸದಸ್ಯರು, ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ , ಗಿರಿಜಾ ಸರ್ಜಿಕಲ್ ಇದರ ಸಿಬ್ಬಂದಿ ವರ್ಗದವರು, ಸಹಕಾರಿಯ ಸದಸ್ಯರು ಪಾಲ್ಗೊಂಡು ಶಿಬಿರವನ್ನು ಯಶಸ್ವಿಯಾಗಿ ನೆರವೇರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Department Cooperative Registrar Girija Surgicals Kuru Amba Rajarajeshwari Temple Manoj kumar Kodical Mayor Shree Gurushakthi Souharda Cooperative Society Kavoor SNDP Souharda Sahakari Spandana Cooperative Spandana NEws
    Previous Articleಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿ
    Next Article ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಆಯ್ಕೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.