Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬ್ಯಾಂಕ್‌, ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನವಿಟ್ಟು ಸಾಲ ಪಡೆಯುತ್ತಿದ್ದ ಖದೀಮರು
    News

    ಬ್ಯಾಂಕ್‌, ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನವಿಟ್ಟು ಸಾಲ ಪಡೆಯುತ್ತಿದ್ದ ಖದೀಮರು

    adminBy adminDecember 20, 2024

    ಮಡಿಕೇರಿಯಲ್ಲಿ ಕೇರಳ ತಂಡದ ವ್ಯವಸ್ಥಿತ ಜಾಲ ಬೇಧಿಸಿದ ಕೊಡಗು ಜಿಲ್ಲಾ ಪೊಲೀಸ್‌ ತಂಡ

    ಮಡಿಕೇರಿ: ನಕಲಿ ಚಿನ್ನ ಅಡಮಾನವಿರಿಸಿ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಿಗಹೆ ವಂಚಿಸುತ್ತಿರುವ ಪ್ರಕರಣಗಳು ಆಗಿಂದಾಗ್ಗೆ ವರದಿಯಾಗುತ್ತಲೇ ಇರುತ್ತವೆ. ಇದೀಗ ಅಂಥದೇ ಪ್ರಕರಣವೊಂದನ್ನು ಬೇಧಿಸಿರುವ ಕೊಡಗು ಜಿಲ್ಲಾ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಕೊಡಗು ಜಿಲ್ಲೆಯ ವಿವಿಧ ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನ ಅಡಮಾನ ಇರಿಸಿ ಸಾಲ ಪಡೆದುಕೊಂಡು ವಂಚಿಸಿರುವ ಆರೋಪಿಗಳು 625 ಗ್ರಾಂ ತೂಕದ ನಕಲಿ ಚಿನ್ನಾಭರಣವನ್ನು ಅಡವು ಇರಿಸಿ 34.95 ಲಕ್ಷ ರೂ. ಸಾಲ ಪಡೆದಿದ್ದರು. ಈ ಪ್ರಕರಣವನ್ನು ಪತ್ತೆ ಹಚ್ಚಿರುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
    ನಕಲಿ ಚಿನ್ನ ಅಡಮಾನವಿಟ್ಟು ಸಾಲ ಪಡೆದ ಪ್ರಕರಣದ ಪ್ರಮುಖ ರೂವಾರಿ ಕೇರಳದ ಮೊಹಮ್ಮದ್ ಕುಂಞ (48). ಈತ ಆಭರಣ ತಯಾರಕನಾಗಿದ್ದು, ಪ್ರದೀಪ್ (60) ಎಂಬಾತನಿಗೆ ಹಣ ನೀಡಿ ನುರಿತ ಚಿನ್ನ ಪರೀಕ್ಷಕರಿಗೂ ಗೊತ್ತಾಗದ ಹಾಗೆ ಸುಮಾರು ಒಂದೂವರೆ ಗ್ರಾಂನಷ್ಟು ಚಿನ್ನದ ಕೋಟಿಂಗ್ ಅನ್ನು ಬಳೆಗಳ ಮೇಲೆ ಹಾಕಿ ನಕಲಿ ಬಳೆಗಳನ್ನು ತಯಾರಿಸಿದ್ದ. ಮಧ್ಯವರ್ತಿ ನಿಶಾದ್ ಎಂಬಾತ ಇದನ್ನು ಪಡೆದು ನವಾಜ್ ಎಂಬಾತನಿಗೆ ನೀಡಿದ್ದ. ಹೀಗೆ, ಈ ಜಾಲ ಕೇರಳದಿಂದ ಕೊಡಗಿಗೆ ವಿಸ್ತರಿಸಿತ್ತು.
    ಕುಂಜಿಲ ಗ್ರಾಮದ ಕೆ.ಎ.ಮೊಹಮ್ಮದ್ ರಿಜ್ವಾನ್‌ (35) ಎಂಬಾತ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಡಿಕೇರಿಯ ಮುಖ್ಯ ಶಾಖೆಯಲ್ಲಿ ಇತ್ತೀಚೆಗೆ 8 ಚಿನ್ನದ ಬಳೆಗಳನ್ನು ಅಡಮಾನ ಮಾಡಿ ಸಾಲ ಪಡೆದುಕೊಳ್ಳುವ ಸಂದರ್ಭ ಅದನ್ನು ಪರಿಶೀಲನೆಗೊಳಪಡಿಸಿದಾಗ ಅವೆಲ್ಲವೂ ನಕಲಿ ಎಂದು ಪತ್ತೆಯಾಗಿದೆ. ನಂತರ ಆತ ಈ ಹಿಂದೆ ಅದೇ ಬ್ಯಾಂಕ್‌ನಲ್ಲಿ ಅಡಮಾನವಿಟ್ಟಿದ್ದ ಆಭರಣಗಳನ್ನೂ ಮತ್ತೊಮ್ಮೆ ಪರಿಶೀಲಿಸಿದ್ದು ಅವುಗಳೂ ನಕಲಿ ಎಂಬುದು ತಿಳಿದುಬಂದಿದೆ. ಕೂಡಲೇ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಹೀಗೆ ವಂಚನೆ ಮಾಡುವ ಜಾಲ ಕೊಡಗಿನಲ್ಲಿದೆ ಎಂಬುದು ಗೊತ್ತಾಯಿತು.
    ಇದೇ ಆಧಾರದಲ್ಲಿ ಈ ಪ್ರಕರಣದಲ್ಲಿ ಭಾಗಿಗಳಾದ ಕುಂಜಿಲ ಗ್ರಾಮದ ಅಬ್ದುಲ್ ನಾಸಿರ್, ಪಡಿಯಾನಿ ಎಮ್ಮೆಮಾಡು ಗ್ರಾಮದ ಪಿ.ಎಚ್.ರಿಯಾಜ್, ಬಿ.ಎ.ಮೂಸಾ, ಎಂ.ಎಂ.ಮಹಮ್ಮದ್ ಹನೀಫ್, ಖತೀಜಾ, ಭಾಗಮಂಡಲ ಅಯ್ಯಂಗೇರಿಯ ರಫೀಕ್, ಫರ್ಹಾನ್‌, ಕೇರಳದ ಮಲಪುರಂ ಜಿಲ್ಲೆಯ ಕೆ.ಪಿ.ನವಾಜ್‌, ಎರ್ನಾಕುಲಂ ಜಿಲ್ಲೆಯ ಕೆ.ಎ.ನಿಶಾದ್ ಸಿಎಂ ಮಹಮ್ಮದ್ ಕುಂಞ, ಪಿ.ಜಿ.ಪುದೀಪ್ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ 223 ಗ್ರಾಂ ತೂಕದ ಚಿನ್ನ ಲೇಪಿತ 28 ಬಳೆಗಳು, ನಗದು ₹ 2 ಲಕ್ಷ, ಬ್ಯಾಂಕ್ ಖಾತೆಗಳಲ್ಲಿ 2.08 ಲಕ್ಷ, ವಿಮೆ ಮೇಲೆ ಹೂಡಿಕೆ ₹ 1.08 ಲಕ್ಷ, ₹ 1.40 ಲಕ್ಷ ಮೌಲ್ಯದ ಒಂದು ಐಫೋನ್‌ ವಶಪಡಿಸಿಕೊಳ್ಳಲಾಗಿದೆ.
    ಹಂಝ ಎಂಬ ಪ್ರಮುಖ ಆರೋಪಿ ತಪ್ಪಿಸಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಮಡಿಕೇರಿ ನಗರ, ವಿರಾಜಪೇಟೆ ನಗರ, ಗ್ರಾಮಾಂತರ ಮತ್ತು ಭಾಗಮಂಡಲ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಪ್ರಕರಣಗಳು ದಾಖಲಾಗಿತ್ತು. ಪ್ರಮುಖ ಆರೋಪಿ ಪ್ರದೀಪ್ ವಿರುದ್ಧ ಇದೇ ವರ್ಷ 3 ಪ್ರಕರಣಗಳು ಸೇರಿ ಒಟ್ಟು 15 ಪ್ರಕರಣಗಳು ದಾಖಲಾಗಿದ್ದವು. ನಿಶಾದ್ ಎಂಬಾತನ ಮೇಲೆ  ದರೋಡೆ ಪ್ರಕರಣ ದಾಖಲಾಗಿದ್ದವು. ಇವರು ಜಾಮೀನಿನ ಮೇಲೆ ಹೊರಬಂದು ಮತ್ತೆ ಮತ್ತೆ ಇಂತಹ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bank Crime Banking Banks and financial institutions of Madikeri were cheated by hiding fake gold in Kerala Crime Debt Gold Gold Ornaments Kodagu Madikeri
    Previous Articleಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ 17ನೇ ಶಾಖೆ ಹಿರಿಯಡ್ಕದಲ್ಲಿ ಆರಂಭ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಪು ಶಾಖೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.