Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಯಚೂರು ಜಿಲ್ಲಾ ಸೌಹಾರ್ದ ಸಹಕಾರಿಗಳ ಸಿಇಒಗಳ ವಾರ್ಷಿಕ ಸಭೆ
    News

    ರಾಯಚೂರು ಜಿಲ್ಲಾ ಸೌಹಾರ್ದ ಸಹಕಾರಿಗಳ ಸಿಇಒಗಳ ವಾರ್ಷಿಕ ಸಭೆ

    adminBy adminJanuary 4, 2025

    ರಾಯಚೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಕಲಬುರಗಿ ಪ್ರಾಂತದ ವತಿಯಿಂದ ಗುರುವಾರ ಸಿಂಧನೂರಿನಲ್ಲಿ ರಾಯಚೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಕಾರ್ಯನಿರ್ವಾಹಕರ ವಾರ್ಷಿಕ ಸಭೆ ಆಯೋಜಿಸಲಾಯಿತು.

    https://chat.whatsapp.com/Ge11n7QCiMj5QyPvCc0H19
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಯಚೂರು ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ದೊಡ್ಡ ಬಸವರಾಜ ಅವರು ಉದ್ಘಾಟನೆ ನೆರವೇರಿಸಿದರು. ಸಂಯುಕ್ತ ಸಹಕಾರಿಯ ಮಾಜಿ ನಿರ್ದೇಶಕ ರಾಜಶೇಖರ್ ಬಿ, ಆರ್.ಕೆ.ಡಿ.ಸಿ.ಸಿ ಬ್ಯಾಂಕ್ ರಾಯಚೂರು ಇದರ ನಿರ್ದೇಶಕ ಸೋಮನಗೌಡ ಬಾದರ್ಲಿ ಮುಖ್ಯ ಅತಿಥಿಗಳಾಗಿದ್ದರು.


    ಸಾಮಾನ್ಯ ಸೇವಾ ಕೇಂದ್ರದ (ಸಿ.ಎಸ್.ಸಿ) ಬಗ್ಗೆ ರಾಯಚೂರು ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ನಜೀಮುದ್ದೀನ್‌ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಕಲಬುರಗಿ ಪ್ರಾಂತೀಯ ಅಧಿಕಾರಿ ಸೂರ್ಯಕಾಂತ್ ರ್ಯಾಕಲೆ ಮುಖ್ಯಕಾರ್ಯನಿರ್ವಾಹಕರ ಶಾಸನಬದ್ಧ ಕಾರ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
    ಸೌಹಾರ್ದ ಸಹಕಾರಿ ದಿನಾಚರಣೆಯ ರಜತ ಮಹೋತ್ಸವ ಅಂಗವಾಗಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಒಟ್ಟು 13 ತಂಡಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಥಮ ಸ್ಥಾನ ಪುಲಕೇಶಿ ತಂಡ ಸಿಂಧನೂರು, ದ್ವಿತೀಯ ಸ್ಥಾನ ಶ್ರೀ ಬಸವೇಶ್ವರ ಸೌಹಾರ್ದ ತಂಡ ಸಿಂಧನೂರು, ತೃತೀಯ ಸ್ಥಾನ ಆರ್.ಸಿ.ಬಿ ತಂಡ ಸಿರವಾರ, ನಾಲ್ಕನೇ ಸ್ಥಾನ ಸಿದ್ದೇಶ್ವರ ತಂಡ ಲಿಂಗಸಗೂರು ತಮ್ಮದಾಗಿಸಿಕೊಂಡಿತು. ರಸಪ್ರಶ್ನೆ ಕಾರ್ಯಕ್ರಮವನ್ನು ರಾಯಚೂರು ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಟರಾಜ ನಡೆಸಿಕೊಟ್ಟರು.


    ಈ ಸಭೆಯಲ್ಲಿ ರಾಯಚೂರು ಜಿಲ್ಲೆಯ 280 ಸೌಹಾರ್ದ ಸಹಕಾರಿಗಳಿಂದ 300 ಪ್ರತಿನಿಧಿಗಳು ಹಾಗೂ ಇತರೆ ಸಿಬ್ಬಂದಿಗಳು ಸೇರಿ ಒಟ್ಟು 330 ಜನ ಭಾಗವಹಿಸಿದ್ದರು. ಅಂಜನಾದೇವಿ ಪ್ರಾರ್ಥನೆ ಹಾಡಿದರು. ರಾಯಚೂರು ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಟರಾಜ ಕಾರ್ಯಕ್ರಮ ನಿರೂಪಿಸಿದರು. ರಾಯಚೂರು ಜಿಲ್ಲಾ ಸೌಹಾರ್ದ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುಸೇನ್ ಭಾಷಾ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    CEO Meet Karnataka Rajya Samyukta Souharda Sahakari RKDCC BANK Raichur Sindhnoor Souharda Sahakari dinacharane
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಜನವರಿ 5ರಂದು ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಶಿಬಿರ
    Next Article ಸೌಹಾರ್ದ ಸಹಕಾರಿಗಳಲ್ಲಿ ಗುಣಮಟ್ಟದ ಸೇವೆಗೆ ಸಿಬ್ಬಂದಿಗಳ ಶ್ರಮ ಮುಖ್ಯ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.