Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಫೆ.17ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ
    News

    ಫೆ.17ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಸಿಇಒಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ

    adminBy adminFebruary 14, 2025

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಮಂಗಳೂರು, ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಬೆಳಗ್ಗೆ 10.30ರಿಂದ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ.ಎಂಎನ್‌.ರಾಜೇಂದ್ರ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್‌ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್‌.ನವೀನ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌.ರಮೇಶ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ಉಪಾಧ್ಯಕ್ಷ ನೀಲಯ ಎಂ.ಅಗರಿ, ಸಿಇಒ ಎಸ್‌.ವಿ.ಹಿರೇಮಠ ಉಪಸ್ಥಿತರಿರಲಿದ್ದಾರೆ.
    ಸಹಕಾರ ಕಾಯ್ದೆಯ ಸ್ವರೂಪ, ಆಡಳಿತ ಮಂಡಳಿ ಸದಸ್ಯರ ಹಕ್ಕು ಮತ್ತು ಜವಾಬ್ದಾರಿಯ ಬಗ್ಗೆ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಸಿಆರ್‌ಆರ್‌, ಎಸ್‌ಎಲ್‌ಆರ್‌, ಸಿಆರ್‌ಎಆರ್‌, ಎನ್‌ಪಿಎ, ಐಎನ್‌ಬಿಪಿ, ಪಿಎಲ್‌ಗಳ ಬಗ್ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್‌ ನಾಯರ್‌ ವಿಷಯ ಮಂಡಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar D.K. District Co Operative Union Dakshina kannada jilla Sahakara Union Dr.M.N.Rajendra Kumar Karnataka Rajya Sahakara Mahamandala Karnataka Rajya Sahakara Marata Mahamandala SCDCC Bank Shashikumar Rai balyottu Spandana
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಹಾಸನದ ವೀರಶೈವ ಲಿಂಗಾಯತ ಜನೋಪಯೋಗಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಮಂಡಳಿ ಭೇಟಿ
    Next Article ಯುಎಲ್‌ಸಿಸಿಎಸ್‌ನ ಅದ್ಭುತ ಪ್ರಯಾಣ: ಕೇಂದ್ರ ಸಚಿವ ಗಡ್ಕರಿ ಶ್ಲಾಘನೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.