Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿಯಿಂದ ಶತಕೋಟಿ ಸಂಭ್ರಮಾಚರಣೆ, ಕೃತಿ ಲೋಕಾರ್ಪಣೆ
    News

    ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿಯಿಂದ ಶತಕೋಟಿ ಸಂಭ್ರಮಾಚರಣೆ, ಕೃತಿ ಲೋಕಾರ್ಪಣೆ

    adminBy adminFebruary 21, 2025

    ಪುತ್ತೂರು: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ದರ್ಬೆ ಪುತ್ತೂರು ಇದರ ಪೂರಕ ಸಂಸ್ಥೆ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬುಧವಾರ “ವೃತ್ತಿ ಬದುಕು ಹೇಗಿರಬೇಕು? ಉದ್ಯೋಗಸ್ಥರಿಗೊಂದು ಮಾರ್ಗದರ್ಶಿʼʼ ಕೃತಿ ಲೋಕಾರ್ಪಣೆಗೊಂಡಿತು.

    https://chat.whatsapp.com/EbVKVnWB6rlHT1mWtsgbch
    ಕೃತಿ ಬಿಡುಗಡೆ ಮಾಡಿ ಮಾತನಾಡಿದ ಪುತ್ತೂರು ವಿವೇಕಾನಂದ ಕಾಲೇಜು(ಸ್ವಾಯತ್ತ) ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸರಸ್ವತಿ ಸಹಕಾರಿಯ ಸೇವಾಕಾರ್ಯಗಳು ಶ್ಲಾಘನೀಯ ಎಂದು ಹೇಳಿದರು. ಲೋಕಾರ್ಪಣೆಗೊಂಡ ಕೃತಿಯ ಕುರಿತು ಮಾತನಾಡಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಕೃತಿಯು ಅತ್ಯಂತ ಪರಿಣಾಮಕಾರಿಯಾಗಿ ಮೂಡಿಬಂದಿದ್ದು ಲೇಖಕರು ವೃತ್ತಿ ಬದುಕಿನ ಪ್ರತಿಯೊಂದು ವಿಷಯಗಳ ಮೇಲೆ ಬೆಳಕು ಚೆಲ್ಲುತ್ತಾ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು.


    ಕೃತಿಯ ಲೇಖಕ, ರಾಜ್ಯ-ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಾರಾಯಣ ಭಟ್‌ ಟಿ.ರಾಮಕುಂಜ ಮಾತನಾಡಿ ಓದುಗರು ಕೃತಿ ಓದಿ ಅದನ್ನು ಅನುಷ್ಠಾನಗೊಳಿಸಿಕೊಂಡರೆ ಸಾರ್ಥಕ್ಯ ನೀಡುತ್ತದೆ ಎಂದು ಹೇಳಿದರು.
    ಇದೇ ಸಂದರ್ಭ ಶ್ರೀ ಸರಸ್ವತಿ ಸಹಕಾರಿಯ ಪ್ರಥಮ ಶಾಖೆ ದರ್ಬೆಯು 100 ಕೋಟಿ ವ್ಯವಹಾರ ದಾಖಲಿಸಿದ ಪ್ರಯುಕ್ತ ಶತಕೋಟಿ ಸಂಭ್ರಮ ಕಾರ್ಯಕ್ರಮವೂ ನಡೆಯಿತು. ಈ ಪ್ರಯುಕ್ತ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನ ಬಿರುಮಲೆಯಲ್ಲಿರುವ ಪ್ರಜ್ಞಾ ಆಶ್ರಮವಾಸಿಗಳಿಗೆ ಉಪಾಹಾರದ ವ್ಯವಸ್ಥೆ ಹಾಗೂ ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಆನಂದಾಶ್ರಮವಾಸಿಗಳಿಗೆ ಒಂದು ದಿನದ ಪ್ರಾಯೋಜಕತ್ವ ನೀಡಲಾಯಿತು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಸರಸ್ವತಿ ಸಹಕಾರಿಯ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಸರಸ್ವತಿ ಸಹಕಾರಿ ನಡೆದುಬಂದ ಹಾದಿಯನ್ನು ಸ್ಮರಿಸಿದರು. ಶ್ರೀ ಸರಸ್ವತಿ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ನಾಯಕ್ ಎ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಹಕಾರಿಯ ಎಂ.ಎಸ್ ರಸ್ತೆ ಶಾಖೆಯ ಸಿಬ್ಬಂದಿ ಸುಷ್ಮಾ ಪ್ರಾರ್ಥಿಸಿದರು, ದರ್ಬೆ ಶಾಖೆಯ ಹಿರಿಯ ವ್ಯವಸ್ಥಾಪಕ ದೇವಿಪ್ರಸಾದ್ ಎ ವಂದಿಸಿದರು. ಆಡಳಿತ ಕಚೇರಿಯ ಸಿಬ್ಬಂದಿ ಬಿಪಿನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Asha Bellare Birumale Prajna Ashrama Mukrampady Anandashrama S R Sathishchandra Shree Sarasvathi Credit Souharda Sahakari Sangha Shree Saraswathi Charitable Trust Shree Saraswathi Credit Co Operative Society
    Previous Articleಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ.ವಾಣಿಶ್ರೀ ವಿಶ್ವನಾಥ್ ಅವಿರೋಧ ಆಯ್ಕೆ
    Next Article ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಲೂವಿಸ್ ಲೋಬೊ, ಉಪಾಧ್ಯಕ್ಷರಾಗಿ ಜೇಮ್ಸ್ ಡಿಸೋಜ ಆಯ್ಕೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.