Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಾರ್ಚ್‌ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
    News

    ಮಾರ್ಚ್‌ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

    adminBy adminFebruary 27, 2025

    ಶಿವಮೊಗ್ಗ: ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ ನಿ., ಶಿಕಾರಿಪುರ, ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ ನಿ., ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ನಿ., ಶಿಕಾರಿಪುರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕಾರಿಪುರ ಹಾಗೂ ಕುಶ್ವಿತ ಮಿನರಲ್ಸ್, (ಜನಸಿರಿ ವಾಟರ್ ಬಾದಲ್) ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್‌ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    https://chat.whatsapp.com/EbVKVnWB6rlHT1mWtsgbch

    ಶಿಕಾರಿಪುರ ಎಸ್‌.ಎಸ್‌ ರಸ್ತೆಯ ಸಾಂಸ್ಕೃತಿಕ ಭವನದಲ್ಲಿ ಬೆಳಗ್ಗೆ 10ರಿಂದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಹಿಳಾ ಜಾನಪದ ಕಲಾಮೇಳ, ಮಹಿಳಾ ಸಾಧಕರಿಗೆ ಸನ್ಮಾನ, ಮಹಿಳಾ ಸಹಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಮತ್ತು ಪುಷ್ಪಗಿರಿ ಮಹಿಳಾ ಸ್ವಸಹಾಯ ಸಂಘಗಳ ಸಮಾವೇಶ ನಡೆಯಲಿದೆ.

    ಬೆಳಗ್ಗೆ 10ಕ್ಕೆ ಜಾನಪದ ಕಲಾಮೇಳ ನಡೆಯಲಿದ್ದು ಶಿಕಾರಿಪುರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಕ್ಕ ದಿವ್ಯ ಸಾನ್ನಿಧ್ಯದಲ್ಲಿ ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ ಜಿ.ಎಂ. ಕಲಾಮೇಳಕ್ಕೆ ಚಾಲನೆ ನೀಡಲಿದ್ದಾರೆ.  ಕರ್ನಾಟಕ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಸಿ.ಲೋಕೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಚಲನಚಿತ್ರ ಲಲಿತಕಲಾ ಮಹಾಮಂಡಳಿಯ ನಿರ್ದೇಶಕರಾದ ಕೆ.ಎನ್.ಮಂಜಾಚಾರ್‌,  ಸಿ.ಪಿ. ಹೆಗಡೆ, ಟಿ.ಬಿ.ತೀರ್ಥಪ್ರಸನ್ನ, ಕಿರಣ್‌ಕಾಂತ್‌, ಶಿವಮೊಗ್ಗ ಜಿಲ್ಲಾ ಕೈ.ಸ.ಮಾ. ಸಹಕಾರ ಸಂಘದ ನಿರ್ದೇಶಕ ಬಿ.ಕೆ. ಗುರುರಾಜ್, ಶಿವಮೊಗ್ಗ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟದ ನಿರ್ದೇಶಕರಾದ ನಾಗರಾಜಸ್ವಾಮಿ, ಚನ್ನಬಸಪ್ಪ, ಮೇಘರಾಜ್‌, ಪುಷ್ಪಗಿರಿ ಸ್ವಸಹಾಯ ಸಂಘಗಳ ಸಮನ್ವಯಾಧಿಕಾರಿ ಈರನಗೌಡ ಕೆ.ಎಸ್‌ ಉಪಸ್ಥಿತರಿರಲಿದ್ದಾರೆ.

    ಮಧ್ಯಾಹ್ನ 12ಕ್ಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಿಜೆಪಿ ರಾಜ್ಯ ಅಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಹಿಳಾ ಸಾಧಕರನ್ನು ಸನ್ಮಾನಿಸಲಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ದಿಶಾ ಸಮಿತಿಯ ಸದಸ್ಯ ಕೆ.ಎಸ್‌.ಗುರುಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಬಿ.ಡಿ.ಭೂಕಾಂತ್‌ ಅಧ್ಯಕ್ಷತೆ ವಹಿಸಲಿದ್ದಾರೆ.

    ಮಧ್ಯಾಹ್ನ 2ಕ್ಕೆ ಮಹಿಳಾ ಗೋಷ್ಠಿ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಶಿಕಾರಿಪುರ ಬಸವಾಶ್ರಮದ ಮಾತೆ ಶರಣಾಂಬಿಕೆ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ವಿಧಾನ ಪರಿಷತ್‌ ಮಾಜಿ ಸದಸ್ಯೆ, ಚಿತ್ರನಟಿ ತಾರಾ ಅನುರಾಧಾ ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು ಅಭಿನಂದನಾ ಭಾಷಣ ಮಾಡಲಿದ್ದಾರೆ. ಶಿಕಾರಿಪುರ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ನಿರ್ದೇಶಕಿ ತೇಜಸ್ವಿನಿ ಬಿ.ವೈ ರಾಘವೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕಾರಿಪುರ ಪುರಸ್ಭೆ ಅಧ್ಯಕ್ಷೆ ಶೈಲಾ ಯೋಗೇಶ್‌ ಮಡ್ಡಿ ಗೌರವ ಉಪಸ್ಥಿತರಿರಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

     

     

    Dr.B D Bhukanth International Womens Day Karnataka Rajya Janapada Kalavidara Sahakara Sangha Karnataka Rajya Parisara mattu Pravaasodyama abhivruddhi sahakara Sangha Shikaripura Kushwitha Mineral Water Shree Basaveshwara sahakara sangha Shikaripura
    Previous Articleಪೆಟ್ರೋಲ್‌ನೊಂದಿಗೆ ಎಥೆನಾಲ್‌ ಮಿಶ್ರಣ ಸಂಬಂಧಿಸಿ ಸಮಿತಿ ರಚನೆ
    Next Article ಸಹಕಾರಿ ಕ್ಷೇತ್ರದಲ್ಲೂ ರಿಲಯನ್ಸ್‌ ಕಂಪನಿ ಹೂಡಿಕೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.