Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಮಸೂದೆಗೆ ಸಹಿ ಹಾಕದೆ ವಾಪಸ್‌ ಕಳಿಸಿದ ರಾಜ್ಯಪಾಲರು
    News

    ಸಹಕಾರಿ ಮಸೂದೆಗೆ ಸಹಿ ಹಾಕದೆ ವಾಪಸ್‌ ಕಳಿಸಿದ ರಾಜ್ಯಪಾಲರು

    adminBy adminMarch 1, 2025

    ನಾಮನಿರ್ದೇಶಿತರಿಗೆ ಮತದಾನದ ಹಕ್ಕು ನೀಡಿದರೆ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತೆ ಎಂದ ಗೆಹ್ಲೋತ್‌

    ಬೆಂಗಳೂರು: ಸಹಕಾರ ವಲಯದಲ್ಲಿ ಮಹತ್ವದ ಬದಲಾವಣೆ ತರಬಲ್ಲ ಎರಡು ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಎರಡನೇ ಬಾರಿ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ. ಸದನದಲ್ಲಿ ಪಾಸ್‌ ಆಗಿ ರಾಜ್ಯಪಾಲರ ಅಂಕಿತಕ್ಕೆ ಬಂದಿದ್ದ ‘ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ-2024’ ಮತ್ತು ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ- 2024’ ಈ ಎರಡನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಹಿ ಹಾಕದೆ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದು, ಈ ವಿಷಯದಲ್ಲಿ ಕೆಲವೊಂದು ಸ್ಪಷ್ಟನೆಯನ್ನೂ ಕೇಳಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಕೆಲವು ದಿನಗಳ ಹಿಂದಷ್ಟೇ ‘ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ 2024’ಯನ್ನು ಸಹಿ ಹಾಕದೆ ವಾಪಸ್ ಕಳುಹಿಸಿದ್ದ ರಾಜ್ಯಪಾಲರು ಇದೀಗ ಮತ್ತೆರಡು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ. ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಹಲವು ಆಕ್ಷೇಪಗಳನ್ನು ಮಾಡಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ಬಗ್ಗೆ ಸರ್ಕಾರವು ತಿದ್ದುಪಡಿ ಮಾಡಿತ್ತು. ಆದರೆ ಈ ತಿದ್ದುಪಡಿಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾಮನಿರ್ದೇಶಿತರಿಗೆ ಮತದಾನದ ಹಕ್ಕುಗಳನ್ನು ನೀಡಿದರೆ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತಾಗುತ್ತದೆ. ಚುನಾಯಿತ ಸದಸ್ಯರ ಹಕ್ಕುಗಳನ್ನು ಹಿಂಬಾಗಿಲಿನ ಮೂಲಕ ಕಸಿದುಕೊಳ್ಳಲಾಗುತ್ತದೆ. ಇದು ಸಹಕಾರಿ ಕ್ಷೇತ್ರದ ಸ್ವಾಯತ್ತತೆಯನ್ನು ದುರ್ಬಲಗೊಳಿಸುವ ಹೆಜ್ಜೆಯಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.
    ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2024ಕ್ಕೂ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸೌಹಾರ್ದ ಸಹಕಾರಿ ಮಸೂದೆಗೆ ಸಂಬಂಧಿಸಿದಂತೆ, ಅಧಿಕಾರಿಗಳು ನೀಡಿದ ಸ್ಪಷ್ಟನೆಗಳು ತೃಪ್ತಿಕರವಾಗಿಲ್ಲ. ಎಲ್ಲ ಸುಸ್ತಿದಾರರಿಗೆ ಮತದಾನದ ಹಕ್ಕು ನೀಡುವ ಬದಲು, ಅವರು ಮತದಾನ ಮಾಡದಂತೆ ತಡೆಯಲು ಸರಿಯಾದ ವಿಧಾನವನ್ನು ಜಾರಿಗೆ ತರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

    ವಿಧೇಯಕದಲ್ಲಿ ಏನಿತ್ತು?
    ಕೋ-ಆಪರೇಟಿವ್‌ ಸೊಸೈಟಿಗಳಿಗೆ ಸರ್ಕಾರ ಮಾಡುವ ನಾಮನಿರ್ದೇಶಿತ ಸದಸ್ಯರ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಈ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಲು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿತ್ತು. ಸಹಕಾರ ಸಂಘಗಳಲ್ಲಿ ಪ್ರಾತಿನಿಧ್ಯವಿಲ್ಲದ ಶೋಷಿತ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ಅಂದರೆ ಮೀಸಲು ವ್ಯವಸ್ಥೆ ಗಟ್ಟಿಗೊಳಿಸುವುದು ಈ ವಿಧೇಯಕದ ಉದ್ದೇಶವಾಗಿತ್ತು. ಜತೆಗೆ ಕೋ-ಆಪರೇಟಿವ್‌ ಚುನಾವಣೆ ಪ್ರಾಧಿಕಾರವನ್ನು ರದ್ದು ಮಾಡಿ ಈ ಅಧಿಕಾರವನ್ನು ಸಹಕಾರ ಸಂಘಗಳ ನಿಬಂಧಕರಿಗೆ ವರ್ಗಾಯಿಸಲು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿತ್ತು. ವಿಧೇಯಕದ ಈ ಪ್ರಮುಖ ಆಶಯಗಳಿಗೇ ರಾಜ್ಯಪಾಲರು ಗಂಭೀರ ಆಕ್ಷೇಪ ಎತ್ತಿದ್ದಾರೆ. ಸಹಕಾರ ಸಂಘಗಳಿಗೆ ಸರ್ಕಾರ ನಾಮನಿರ್ದೇಶನ ಸದಸ್ಯರ ಪ್ರಮಾಣ ಹೆಚ್ಚಿಸಿ ಅವರಿಗೆ ಮತದಾನದ ಹಕ್ಕು ನೀಡುವುದು ಪ್ರಜಾತಂತ್ರದ ಆಶಯಕ್ಕೆ ವಿರುದ್ಧವಾಗಿದೆ. ಇದು ಸಹಕಾರ ವಲಯದ ಸ್ವಾಯತ್ತತೆಯನ್ನೇ ದುರ್ಬಲಗೊಳಿಸುತ್ತದೆ. ಅನಗತ್ಯ ಹೊರೆ ಎಂಬ ಕಾರಣ ನೀಡಿ ಚುನಾವಣಾ ಪ್ರಾಧಿಕಾರವನ್ನು ರದ್ದುಪಡಿಸುವುದರಿಂದ ಮುಕ್ತ ಮತ್ತು ನ್ಯಾಯಯುತ ಚುನಾವಣೆ ದೃಷ್ಟಿಯಿಂದ ಒಳ್ಳೆಯದಲ್ಲ ಎಂದಿದ್ದಾರೆ.
    ಸೌಹಾರ್ದ ಸಹಕಾರಿ ಸಂಸ್ಥೆಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದ ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ’ಕ್ಕೂ ರಾಜ್ಯಪಾಲರು ಅಸಮ್ಮತಿ ಸೂಚಿಸಿದ್ದಾರೆ. ನೋಂದಣಿಯಾದ ಬಳಿಕ ಸೌಹಾರ್ದ ಸಹಕಾರ ಸಂಸ್ಥೆಗಳಲ್ಲಿ ಸರ್ಕಾರದ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಠೇವಣಿದಾರರ ಹಿತದೃಷ್ಟಿಯಿಂದ ಈ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಲು ಪೂರಕವಾದ ಅಂಶಗಳನ್ನು ಕಾಯ್ದೆಯಲ್ಲಿ ಸೇರ್ಪಡೆ ಮಾಡಿ ತಿದ್ದುಪಡಿ ವಿಧೇಯಕವನ್ನು ಸರ್ಕಾರ ರೂಪಿಸಿತ್ತು. ಸಹಕಾರಿ ಸಂಸ್ಥೆಗಳ ಸ್ವಾಯತ್ತತೆಗೆ ಧಕ್ಕೆ ತರುವ ಅಂಶಗಳಿವೆ ಎಂಬುದಕ್ಕೆ ಕಾರಣಗಳನ್ನು ಪಟ್ಟಿ ಮಾಡಿರುವ ರಾಜ್ಯಪಾಲರು ಈ ವಿಧೇಯಕವನ್ನೂ ಹಿಂತಿರುಗಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    2024 Banking Co Operative Cooperative Cooperative Department Cooperative Registrar Karnataka Co-operative Societies (Amendment) Bill Karnataka Governor Karnataka Souharda Sahakari (Amendment) Bill Spandana Thavarchand Gehlot
    Previous Articleಸೆಬಿ ನೂತನ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ
    Next Article ಬೆಳ್ಮಣ್‌ನಲ್ಲಿ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಉದ್ಘಾಟನೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.