Top News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025

    ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    May 28, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ “ಆತ್ಮಸಮ್ಮಾನ”
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ “ಆತ್ಮಸಮ್ಮಾನ”

    adminBy adminMarch 11, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅಧ್ಯಕ್ಷತೆಯಲ್ಲಿ “ಆತ್ಮಸಮ್ಮಾನ” ಕಾರ್ಯಕ್ರಮ ಆಯೋಜಿಸಲಾಗಿತ್ತು.

    https://chat.whatsapp.com/EbVKVnWB6rlHT1mWtsgbch
    ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕ ಮಹಿಳೆಯರಾದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ ರೋಹಿಣಿ ಹಾಗೂ ಪ್ರಾಧ್ಯಾಪಕರು ಮತ್ತು ಹಾಸ್ಯ ಸಾಹಿತಿಗಾರರಾದ ಭುವನೇಶ್ವರಿ ಹೆಗಡೆ ಇವರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಎ ರೋಹಿಣಿ, ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಹೆಣ್ಣು ಸಹನಾಮಯಿ. ಮನೆ, ಕುಟುಂಬ, ಕಚೇರಿ, ಮಕ್ಕಳು, ಕೆಲಸ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಹೆಣ್ಣಿನ ಶಕ್ತಿಗೆ ಅದರದ್ದೇ ಆದ ಮಹತ್ವವಿದೆ. ಹೆಣ್ಣು ಮಕ್ಕಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹೆಚ್ಚಿನ ಕಡೆ ಕೆಲಸಕ್ಕೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಬ್ಯಾಂಕಿಂಗ್ ಸೇವೆಗೆ ಸೀಮಿತವಾಗಿರದೇ ಇತರ ಸಮಾಜಮುಖಿ ಚಟುವಟಿಕೆಗಳನ್ನು ವರ್ಷಂಪ್ರತಿ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು.
    ಭುವನೇಶ್ವರಿ ಹೆಗಡೆ ಮಾತನಾಡಿ, “ಸುವ್ಯವಸ್ಥಿತವಾಗಿ ರೂಪುಗೊಂಡಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಹಿಳಾ ಸಬಲೀಕರಣದ ಪ್ರತೀಕವಾಗಿದೆ. ಈ ಸಂಸ್ಥೆಯಲ್ಲಿ ಶೇ.95ಕ್ಕೂ ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗ ನೀಡಿರುವುದನ್ನು ನೋಡಿದರೆ ಮಹಿಳೆಯರಿಗೆ ನೀಡುವ ಗೌರವ ಗೊತ್ತಾಗುತ್ತದೆ ಎಂದರು.
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವರ್ಷಂಪ್ರತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಆಚರಿಸಿಕೊಂಡು ಬರುತ್ತಿದೆ. ಅದೇ ರೀತಿ ಈ ವರ್ಷ ಕೆ.ಎ ರೋಹಿಣಿ ಹಾಗೂ ಭುವನೇಶ್ವರಿ ಹೆಗಡೆಯವರನ್ನು ಗುರುತಿಸಿ ಸನ್ಮಾನಿಸಲು ಸಂಘವು ತುಂಬಾ ಹೆಮ್ಮೆ ಪಡುತ್ತಿದೆ. ಸಂಘವು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗ ನೀಡಿದ್ದು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ೩೦ ಶಾಖೆಗಳ ಶಾಖಾಧಿಕಾರಿಗಳು ಕೂಡ ಮಹಿಳೆಯರೇ ಆಗಿದ್ದಾರೆ ಎಂದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ಜಿ.ಪರಮೇಶ್ವರ್ ಪೂಜಾರಿ, ದಿವಾಕರ ಬಿ,ಪಿ., ಗೋಪಾಲ್ ಎಂ. ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್‌ ಗೌರವ ಅಧ್ಯಕ್ಷ ವಾಮನ್ ಕೆ., ಅಧ್ಯಕ್ಷ ಗೋಪಾಲ ಪೂಜಾರಿ ವೀರನಗರ, ಕೋಶಾಧಿಕಾರಿ ಬಾಬು ಎಸ್.ಕರ್ಕೇರ ಮತ್ತಿತ್ತರರು ಉಪಸ್ಥಿತರಿದ್ದರು. ಸಂಘದ ಉಳ್ಳಾಲ ಶಾಖೆಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿ, ನೀರುಮಾರ್ಗ ಶಾಖೆಯ ಶಾಖಾಧಿಕಾರಿ ಸಂದೀಪ್ ವಂದಿಸಿದರು. ಸಂಘದ ಸಹಾಯಕ ಪ್ರಬಂಧಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atma Sammana Atmashakthi Atmashakthi Vividhoddesha Sahakari Sangha Banking Bhuvaneshwari Hegade Chitharanjan Bolar Chittaranjan Bolar Co Operative ministry Cooperative Cooperative Department Cooperative Registrar International Womens Day
    Previous Articleಮಂಗಳೂರು ಸೌಹಾರ್ದ ಸಹಕಾರಿ ಸಂಘದಿಂದ ಕಣ್ಣು ಪರೀಕ್ಷೆ, ಚಿಕಿತ್ಸಾ ಶಿಬಿರ
    Next Article ಮೈಕ್ರೋ ಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಿಧೇಯಕಕ್ಕೆ ಅನುಮೋದನೆ

    Related Posts

    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    News

    ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    May 28, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025

    ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    May 28, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.