Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 16.01 ಕೋಟಿ ರೂಪಾಯಿ ನಿವ್ವಳ ಲಾಭ
    News

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 16.01 ಕೋಟಿ ರೂಪಾಯಿ ನಿವ್ವಳ ಲಾಭ

    adminBy adminApril 11, 2025

    ಮಂಗಳೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಸಕ್ತ ಸಾಲಿನಲ್ಲಿ 16.01 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

    ಕಳೆದ ವರ್ಷ ರೂ.12.01 ಕೋಟಿ ರೂ. ಲಾಭ ಗಳಿಸಿದ್ದು, ಈ ಬಾರಿ 4 ಕೋಟಿ ರೂ. ಲಾಭ ಹೆಚ್ಚಳದೊಂದಿಗೆ ಶೇ.31 ಏರಿಕೆಯಾಗಿದೆ. ಇದು ಸಂಘದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಎಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪೇರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ.ರೈ ತಿಳಿಸಿದ್ದಾರೆ. ಸಂಘದ ಅನುತ್ಪಾದಕ ಆಸ್ತಿ 24 ಲಕ್ಷ ರೂ. ಇದ್ದು ಇದು ಹೊರಬಾಕಿ ಸಾಲದ ಶೇ.0.05ಕ್ಕೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    2020ನೇ ಸಾಲಿನಲ್ಲಿ ಜೈರಾಜ್ ಬಿ.ರೈ ಅವರು 2ನೇ ಬಾರಿ ಅಧ್ಯಕ್ಷರಾಗಿ ನೇತೃತ್ವ ವಹಿಸಿಕೊಂಡ ಸಂದರ್ಭ ಹಮ್ಮಿಕೊಂಡ ವಿಷನ್-2025ರಂತೆ ಮಾರ್ಚ್ 2025ಕ್ಕೆ ಸಂಘದ ಒಟ್ಟು ವ್ಯವಹಾರ ರೂ.1000 ಕೋಟಿ, 5 ಹೊಸ ಶಾಖೆಗಳೊಂದಿಗೆ 30 ಶಾಖೆಗಳನ್ನು ಹೊಂದುವುದು, ರೂ.10 ಕೋಟಿ ಲಾಭ, ಅನುತ್ಪಾದಕ ಆಸ್ತಿಯನ್ನು ಶೇ.10ಕ್ಕೆ ಸೀಮಿತಗೊಳಿಸುವುದು ಎಂಬ ಗುರಿಗಳನ್ನು ನಿಗದಿತ ಅವಧಿಗಿಂತ ಮೊದಲೇ ತಲುಪಲಾಗಿದೆ.1000 ಕೋಟಿ ರೂ. ಗೆ ಮೀರಿದ ಒಟ್ಟು ವ್ಯವಹಾರ ದಾಟಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮೊದಲ ಕ್ರೆಡಿಟ್ ಸಹಕಾರ ಸಂಘ ಎಂಬ ದಾಖಲೆ ರಾಮಕೃಷ್ಣ ಸೊಸೈಟಿಯದು.1094 ಕೋಟಿ ರೂ. ಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ.
    25 ಶಾಖೆಗಳ ಮುಖಾಂತರ 1,27,971 ಠೇವಣಿ ಖಾತೆಗಳಲ್ಲಿ ಒಟ್ಟು 589 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು ಮಾರ್ಚ್ ಅಂತ್ಯಕ್ಕೆ ಸಂಘದ ಹೊರಬಾಕಿ ಸಾಲವು ರೂ.505 ಕೋಟಿ ರೂ. ಮೀರಿದೆ. 1643 ಖಾತೆಗಳಲ್ಲಿ ರೂ. 34 ಕೋಟಿ ಆಟೋರಿಕ್ಷಾ ಸಾಲ, 521 ಯುವ ಜನತೆಗೆ ದ್ವಿಚಕ್ರ ಸಾಲ 3.98 ಕೋಟಿ ರೂ., ಚಿನ್ನಾಭರಣ ಸಾಲ, ಗೃಹ ಸಾಲ, ಇತರ ವಾಹನ ಸಾಲ, ಅಡವು ಸಾಲ ಮುಂತಾದ ಸೌಲಭ್ಯ ನೀಡಲಾಗುತ್ತಿದೆ ಎಂದು ಜೈರಾಜ್ ರೈ ತಿಳಿಸಿದ್ದಾರೆ.
    ವಿಷನ್ -2030ರಂತೆ 2030ರ ಮಾರ್ಚ್ ಗೆ 2,000 ಕೋಟಿ ರೂ. ಒಟ್ಟು ವ್ಯವಹಾರ, ಅನುತ್ಪಾದಕ ಆಸ್ತಿಯನ್ನು ಶೇ.0.10ರೊಳಗೆ ಸೀಮಿತಗೊಳಿಸುವುದು, 20 ಕೋಟಿ ರೂ. ನಿವ್ವಳ ಲಾಭ, ಶಾಖೆಗಳ ಸಂಖ್ಯೆ 40ಕ್ಕೆ ಏರಿಕೆ, ಸದಸ್ಯರಿಗೆ ಶೇ.25ರಷ್ಟು ಡಿವಿಡೆಂಡ್ ನೀಡುವ ಯೋಜನೆ ಹೊಂದಲಾಗಿದೆ. ಮಂಗಳೂರಿನ ಕೇಂದ್ರ ಕಚೇರಿಯ ಹೊಸ ಕಟ್ಟಡದ ಕೆಲಸ ಪ್ರಗತಿಯಲ್ಲಿದ್ದು ಸೆಪ್ಟೆಂಬರ್‌ಗೆ ಲೋಕಾರ್ಪಣೆಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar K.Jairaj B Rai Shree Ramakrishna Credit Co Operative Soceity
    Previous Articleಏಪ್ರಿಲ್‌ 13ರಂದು ದಿ ಕರಾವಳಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 15ನೇ ಪಡೀಲ್ ಶಾಖೆ ಉದ್ಘಾಟನೆ
    Next Article ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ 19.37 ಕೋಟಿ ರೂ. ಲಾಭ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.