ಮಂಗಳೂರು; ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇವರ ಸಮನ್ವಯದಲ್ಲಿ ಮಂಗಳೂರು ಕೇಂದ್ರಿತವಾಗಿ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ (ಎಚ್.ಡಿ.ಸಿ.ಎಂ) ಅಧಿವೇಶನ ದೂರ ಶಿಕ್ಷಣ ಕೋರ್ಸಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಮೂವರಿಗೆ
ರ್ಯಾಂಕ್ ಲಭಿಸಿದೆ.
https://chat.whatsapp.com/EbVKVnWB6rlHT1mWtsgbch
ಪ್ರಥಮ ಸ್ಥಾನವನ್ನು ಕಳಂಜ- ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಗೀತಾಶ್ರೀ ಎಂ., ದ್ವಿತೀಯ ಸ್ಥಾನ ಭವ್ಯಶ್ರೀ ರೈ ಕೆ., ತೃತೀಯ ಸ್ಥಾನ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ಸೌಮ್ಯ ಡಿ. ಪಡೆದಿದ್ದಾರೆ. ಈ ಬ್ಯಾಚ್ನಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ 127 ಶಿಕ್ಷಣಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 16 ಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ಮತ್ತು 90 ಶಿಕ್ಷಣಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 6 ಶಿಕ್ಷಣಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.
ಪ್ರಾದೇಶಿಕ ಸಹಕಾರ ನಿರ್ವಹಣಾ ಕೇಂದ್ರ ಬೆಂಗಳೂರು, ಇವರು ನೀಡುತ್ತಿರುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ದೂರ ಶಿಕ್ಷಣ ಕೋರ್ಸನ್ನು ಮಂಗಳೂರು ಕೇಂದ್ರಿತವಾಗಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ಸಹಭಾಗಿತ್ವದಲ್ಲಿ ಈಗಾಗಲೇ ೮ ಬ್ಯಾಚ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, 800ಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಭಾಗವಹಿಸಿ ಇದರ ಪ್ರಯೋಜನ ಪಡೆದಿದ್ದು, ಮುಂದಿನ ಬ್ಯಾಚ್ಗೆ ನೋಂದಣಿ ಪ್ರಕ್ರಿಯೆ ಅತೀ ಶೀಘ್ರದಲ್ಲಿ ಆರಂಭವಾಗಲಿದ್ದು, ಆಸಕ್ತ ಸಹಕಾರ ಸಂಘಗಳ ಸಿಬ್ಬಂದಿ ಹಾಗೂ ಪದವೀಧರರು ಕೋರ್ಸಿನ ವಿವರಗಳನ್ನು ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಹತ್ತಿರದ ಶಾಖೆಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 0824-2003355, 2008855, 2007755, 8150063555ಕ್ಕೆ ಸಂಪರ್ಕಿಸಬಹುದು.