ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ವತಿಯಿಂದ ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ 2 ದಿನಗಳ “ಆಡಳಿತ ಪರಿಣಿತಿ ಹಾಗೂ ವ್ಯವಹಾರ ಅಭಿವೃದ್ಧಿ ತರಬೇತಿ” ಕಾರ್ಯಕ್ರಮ ಬೆಂಗಳೂರಿನ ಮಲ್ಲೇಶ್ವರದ ಸಂಯುಕ್ತ ಸಹಕಾರಿಯ ಸೌಹಾರ್ದ ಸಹಕಾರಿ ಸೌಧದಲ್ಲಿ ಆಯೋಜಿಸಲಾಗಿತ್ತು.
https://chat.whatsapp.com/EbVKVnWB6rlHT1mWtsgbch
ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ವಹಿಸಿದ್ದರು. ಉದ್ಘಾಟನೆಯನ್ನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ. ಶ್ರೀಧರ ಮಾನ್ಯ ನೆರವೇರಿಸಿದರು. ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ ಇವರು ಪ್ರಾಸ್ತಾವಿಕ ಮಾತನಾಡಿದರು. ಸಹಕಾರ ಸಂಘಗಳ ಅಪರ ನಿಬಂಧಕರಾದ ಹೆಚ್.ಎಸ್. ನಾಗರಾಜಯ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕವಿತಾ ಸ್ವಾಗತಿಸಿದರು. ಸಹಾಯಕಿ ನಂದಿನಿ ಕಾರ್ಯಕ್ರಮ ನಿರೂಪಿಸಿದರು. ಬಾಬು ಪಠಾಣ ವಂದಿಸಿದರು. 30 ಸೌಹಾರ್ದ ಸಹಕಾರಿಗಳಿಂದ 59 ಶಿಬಿರಾರ್ಥಿಗಳು ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com