ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಆಶ್ರಯದಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್, ಇಂಟರಾಕ್ಟ್ ಕ್ಲಬ್ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ, ಮಂಜುಶ್ರೀ ಭಜನಾ ಮಂದಿರ ದಂಡ್ಯೊಟ್ಟು, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಹಣ್ಣು ಹಂಪಲು ಸಸಿಗಳ ನಾಟಿ ಮತ್ತು ಗಿಡ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಬಡಕೋಡಿ ಮಂಜುಶ್ರೀ ಭಜನಾ ಮಂದಿರ ಆವರಣದಲ್ಲಿ ಆಯೋಜಿಸಲಾಯಿತು.
https://chat.whatsapp.com/EbVKVnWB6rlHT1mWtsgbch
ಕಾರ್ಯಕ್ರಮದಲ್ಲಿ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಸಿಗಳನ್ನು ನೆಡುವ ಕಾರ್ಯಕ್ರಮ ಯಾರು ಕೂಡ ಮಾಡಬಹುದು, ಆದರೆ ಅದನ್ನು ಪೋಷಿಸುವ ಕಾರ್ಯವನ್ನು ಕೂಡ ಮಾಡುವಲ್ಲಿ ಭಾಗಿಯಾಗಬೇಕು ಎಂದರು. ಇಂದಿರಾ ಗಾಂದಿ ವಸತಿ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಾಲೆಯ ಎಲ್ಲಾ ಮಕ್ಕಳ ಜನ್ಮದಿನದ ಪ್ರಯುಕ್ತ 125 ಮಕ್ಕಳಲ್ಲಿ 105 ಮಕ್ಕಳು ಗಿಡ ನೆಟ್ಟು ಬೆಳೆಸಿದ್ದಾರೆ ಎಂದು ಹೇಳಿದರು. ರೋಟರಿ ಕ್ಲಬ್ ಅಧ್ಯಕ್ಷರು ಮಾತನಾಡಿ ಹಣ್ಣು ಹಂಪಲಿನ ಗಿಡಗಳನ್ನು ನಾವು ನೆಡುವುದರಿಂದ ಕಾಡುಪ್ರಾಣಿಗಳು ನಾಡಿಗೆ ಬರುವುದಿಲ್ಲ. ಆದ್ದರಿಂದ ಹೆಚ್ಚು ಹೆಚ್ಚು ಕಾಡನ್ನು ಬೆಳೆಸಬೇಕು ಎಂದರು.

ಸ೦ಘದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು. ಹೊಸಂಗಡಿ ಗ್ರಾಮ ಪಂಚಾಯತ್ ಪಿಡಿಒ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹೊಸಂಗಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

