ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಪದ್ಮಶಾಲಿ ಸಮಾಜ ಸೇವಾ ಸಂಘ, ಉಲ್ಲಾಳ ಮತ್ತು ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ಸೇವಾ ಯುವ ವೇದಿಕೆ, ಉಲ್ಲಾಳ ಹಾಗೂ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ, ಇವುಗಳ ಸಹಕಾರದೊಂದಿಗೆ ಜುಲೈ 6ರಂದು ಉಳ್ಳಾಲದ ಪದ್ಮಶಾಲಿ ಸಮಾಜ ಭವನದಲ್ಲಿ ಬೆಳಗ್ಗೆ 9.30ರಿಂದ 31ನೇ ಬೃಹತ್ ಉಚಿತ ವೈದ್ಯಕೀಯ/ದಂತ/ಕಣ್ಣು/ಹೃದಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದೆ.
https://chat.whatsapp.com/EbVKVnWB6rlHT1mWtsgbch
ಕೆಎಂಸಿ ಅತ್ತಾವರ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಯ ಹಿರಿಯ ತಜ್ಞ ಅನುಭವೀ ವೈದ್ಯರುಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಅವಶ್ಯಕತೆ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಿ ಎಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ. ಎಸ್ ಗುರುರಾಜ್ ತಿಳಿಸಿದ್ದಾರೆ. ಶಿಬಿರದಲ್ಲಿ ಚರ್ಮ, ಎಲುಬು, ಕಣ್ಣು, ಮೂಗು, ಗಂಟಲು, ಸ್ತ್ರೀರೋಗ ಚಿಕಿತ್ಸೆ ಇತ್ಯಾದಿ ಚಿಕಿತ್ಸೆಗಳನ್ನು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

