Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ
    News

    ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

    adminBy adminJune 30, 2025

    ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ ಮತ್ತು ಫೇಮಸ್ ಯೂಥ್ ಕ್ಲಬ್ ತೋಕೂರು ಆಶ್ರಯದಲ್ಲಿ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್‌ ದಕ್ಷಿಣ ಕನ್ನಡ, ರೋಟರಿ ಕ್ಲಬ್‌ ಬೈಕಂಪಾಡಿ, ಪೂಜಾ ಎರೇಂಜರ್ಸ್‌ ಮತ್ತು ಕೇಟರರ್ಸ್‌, ಪೂಜಾ ಫ್ರೆಂಡ್ಸ್‌ ಹಳೆಯಂಗಡಿ, ತೋಕೂರು ಎಸ್‌ಎಸ್‌ ಮ್ಯೂಸಿಕ್, ಸಾರ್ವಜನಿಕ ದಂತ ಆರೋಗ್ಯ ವಿಭಾಗ ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ನಿಟ್ಟೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಫೇಮಸ್‌ ಯೂತ್‌ ಕ್ಲಬ್‌ ಮತ್ತು ಮಹಿಳಾ ಮಂಡಳ ಹತ್ತನೇ ತೋಕೂರು ಹಳೆಯಂಗಡಿ ಇಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಉಚಿತ ದಂತ ಚಿಕಿತ್ಸಾ ಶಿಬಿರ ಭಾನುವಾರ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಸಂಸ್ಥೆಯ ಗೌರವಾಧ್ಯಕ್ಷ ಗುರುರಾಜ್ ಎಸ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ನಿರ್ದೇಶಕ ನವೀನ್ ಸಾಲ್ಯಾನ್ ಪಂಜ ಶಿಬಿರದ ಉದ್ಘಾಟನೆ ನೆರವೇರಿಸಿದರು. ಮುಖ್ಯ ಅತಿಥಿ ಎಬಿ ಶೆಟ್ಟಿ ಕಾಲೇಜಿನ ಉಪನ್ಯಾಸಕಿ ಡಾ.ಶಿಲ್ಪಾ ಎಂ ರಾವ್ ಮಾತನಾಡಿ ಯುವ ಪೀಳಿಗೆಯನ್ನು ದುಶ್ಚಟಗಳಿಂದ ಮುಕ್ತಗೊಳಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾದದ್ದು ಎಂದರು.


    ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಶಾಖೆಯ ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ, ಪೂಜಾ ಫ್ರೆಂಡ್ಸ್ ಉಪಾಧ್ಯಕ್ಷ ಆಕಾಶ್ ಮೆಂಡನ್, ಫೇಮಸ್ ಯೂತ್ ಕ್ಲಬ್‌ನ ಅಧ್ಯಕ್ಷ ಸಂಪತ್ ಜೆ ಶೆಟ್ಟಿ ಮತ್ತು ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಪಡುಪಣಂಬೂರು ಗ್ರಾ ಪಂ ಉಪಾಧ್ಯಕ್ಷ ಹೇಮನಾಥ ಅಮೀನ್, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷ ದಿನಕರ್ ಸಾಲ್ಯಾನ್, ವಿಶ್ವ ಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿಯ ಅಧ್ಯಕ್ಷ ಗಣೇಶ್ ಜಿ ಬಂಗೇರ, ತೋಕೂರು ಎಸ್‌ಎಸ್ ಮ್ಯೂಸಿಕ್ ಮುಖ್ಯಸ್ಥರಾದ ಹರಿಪ್ರಸಾದ್, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ನ ಪದಾಧಿಕಾರಿ ಸುರೇಶ್ ಮತ್ತು ಸಂತೋಷ್ ದೇವಾಡಿಗ. ಶ್ರೀ ಓಂಕಾರೇಶ್ವರಿ ಮಂದಿರದ ಅಧ್ಯಕ್ಷರಾದ ಸದಾಶಿವ ಕುಂದರ್, ಧರ್ಮಾನಂದ ಶೆಟ್ಟಿಗಾರ್, ಸಂಜೀವ ಕರ್ಕೇರ ಓಂಕಾರೇಶ್ವರಿ ನಗರ, ಹಿಮಕರ್ ಕೋಟ್ಯಾನ್ ಮತ್ತು ಸುರೇಶ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
    ಕಾರ್ಯಕ್ರಮದಲ್ಲಿ ತಂಬಾಕು ದುಷ್ಪರಿಣಾಮದ ಬಗ್ಗೆ ಬೀದಿನಾಟಕ ಪ್ರದರ್ಶಿಸಲಾಯಿತು. ವೈದ್ಯಕೀಯ ಶಿಬಿರದಲ್ಲಿ 48 ಜನ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡರು. ಫೇಮಸ್ ಯೂತ್ ಕ್ಲಬ್‌ ಕಾರ್ಯದರ್ಶಿ ಮೋಹನ್‌ದಾಸ್‌ ದೇವಾಡಿಗ ಸ್ವಾಗತಿಸಿದರು. ಉಪಾಧ್ಯಕ್ಷ ಮಹಮ್ಮದ್ ಶರೀಫ್ ವಂದಿಸಿದರು. ಫೇಮಸ್‌ ಯೂತ್ ಕ್ಲಬ್ಬಿನ ನಿಕಟಪೂರ್ವ ಅಧ್ಯಕ್ಷ ಭಾಸ್ಕರ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

    A.B Shetty denatla College FAmous Youth Club And Mahila Mandala Free Health Camp Haleyangadi Pooja Arrangers and Caterers Haleyangadi Thokuru S.S Music Priyadarshini Co Operative Society Haleyangadi Rotary Club Baikampadi Vishwa Thambaku Rahitha Dinacharane
    Previous Articleಸಮಾಜ ಸೇವಾ ಸಹಕಾರಿ ಸಂಘ ಪ್ರಾಯೋಜಕತ್ವದಲ್ಲಿ ಡಾ|ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಂಚಿಕೆ ಬಾಳಪಥ ಬಿಡುಗಡೆ
    Next Article ಅಂಚೆ ಕಚೇರಿಗಳಿಗೂ ಡಿಜಿಟಲ್‌ ಸ್ಪರ್ಶ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.