ಬಜ್ಪೆ: ಇಲ್ಲಿನ ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಮಂಗಳೂರು ಶಾಖೆಯಲ್ಲಿ ಇ ಸ್ಟ್ಯಾಂಪ್ ಸೌಲಭ್ಯದ ಉದ್ಘಾಟನಾ ಸಮಾರಂಭವು ಆಗಸ್ಟ್ 2ರಂದು ಶನಿವಾರ ಬೆಳಗ್ಗೆ 10.30ಕ್ಕೆ ಸ್ಟೇಟ್ಬ್ಯಾಂಕ್ನ ಪಯೋನಿಯರ್ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೃಷ್ಣಾನಂದ ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲ ಮೋಹನ್ದಾಸ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೋಟರಿ ವಕೀಲ ಇಸ್ಮಾಯಿಲ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಬಿ.ಕೃಷ್ಣಪ್ಪ) ದ.ಕ. ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ, ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷ ವಿಲಿಯಂ ಇ ಲೋಬೊ, ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ, ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷೆ ಮಂಜುಳಾ ನಾಯಕ್, ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಕಾನೂನು ಸಲಹೆಗಾರ ಸುಕೇಶ್ ಕುಮಾರ್, ಭುವಿ ಭೂಮಾಪನ ಭೂ ದಾಖಲೆಗಳ ಸೇವಾ ಕೇಂದ್ರದ ಜಯಕುಮಾರ್, ವಕೀಲ ಸರ್ಫರಾಜ್, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು)ದ ಅಧ್ಯಕ್ಷ ಮುಜಾಫರ್ ಅಹಮ್ಮದ್, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ಉಪಾಧ್ಯಕ್ಷ ಹರೀಶ್ ಪೂಜಾರಿ, ಕಟೀಲು ನಂದಿನಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಸಲಹೆಗಾರ ಶಶಿಧರ ಶೆಟ್ಟಿ, ಕಟೀಲು ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಷಾ, ವಕೀಲರಾದ ಶಕೀಲುರಹ್ಮಾನ್ ಉಪಸ್ಥಿತರಿರಲಿದ್ದಾರೆ. ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷೆ ಜಯಲಕ್ಷ್ಮೀ, ಶಾಖಾ ವ್ಯವಸ್ಥಾಪಕಿ ಲಾವಣ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾತಿ ಮತ್ತು ಪರಿವರ್ತನಾ ಕೋ ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ಸದಸ್ಯರು ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com









