ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ ಬೆರ್ನಾಡ್ ಅಭಿಪ್ರಾಯ
ಹಳೆಯಂಗಡಿ: ಸಹಕಾರಿ ಚಳವಳಿ ಕರಾವಳಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಚಳವಳಿಯನ್ನು ಪ್ರಾರಂಭಿಸಿ ಇಂದು ಸಹಕಾರಿ ರಂಗವು ಬಲಿಷ್ಠವಾಗಿ ಇರಬೇಕಾದರೆ ಸಹಕಾರಿ ಪಿತಾಮಹ ದಿ। ಮೊಳಹಳ್ಳಿ ಶಿವರಾಯರೇ ಕಾರಣ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್.ವಸಂತ ಬೆರ್ನಾಡ್ ಹೇಳಿದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಸೋಮವಾರ ಮೊಳಹಳ್ಳಿ ಶಿವರಾಯರ ೧45ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

https://chat.whatsapp.com/EbVKVnWB6rlHT1mWtsgbch
ಪಾವಂಜೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ.ಸೂರ್ಯಕುಮಾರ ಅವರು ಮುಖ್ಯ ಅತಿಥಿಯಾಗಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರು ಸ್ವಾಗತಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು. ಬ್ಯಾಂಕ್ನ ನಿರ್ದೇಶಕರಾದ ಉಮಾನಾಥ್ ಜೆ.ಶೆಟ್ಟಿಗಾರ್, ನವೀನ್ ಸಾಲ್ಯಾನ್ ಪಂಜ, ಶಾಖಾ ಪ್ರಬಂಧಕರಾದ ಪ್ರಜ್ಞಾಶ್ರೀ, ಅಭಿಷ್ಠಾ ಜೈನ್, ಸಿಬ್ಬಂದಿ ಸಿತಾರ ಕೋಟ್ಯಾನ್, ಪ್ರತೀಕ್ ಪಿ., ಅಕ್ಷಯ್, ನಂದಿತಾ ವಿ.ಪದ್ಮಶಾಲಿ, ರೇಷ್ಮಾ ಕುಮಾರಿ, ವಿನಿತಾ ವಿಲ್ಮಾ ಕೈರನ್ನ, ಪ್ರಕಾಶ್ಚಂದ್ರ ಶೆಟ್ಟಿಗಾರ್, ಚಿಂತನ್ ಶೆಟ್ಟಿ ಉಪಸ್ಥಿತರಿದ್ದರು. ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಎಂ. ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com




