ಮೂಡುಬಿದಿರೆ: 109ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯು 2024-25ನೇ ಸಾಲಿನಲ್ಲಿ 57.33 ಕೋಟಿ ರೂ. ಆದಾಯದೊಂದಿಗೆ 10.42 ಕೋಟಿ ರೂ.ಗೂ ಅಧಿಕ ಲಾಭ ಗಳಿಸಿದ್ದು ತಮ್ಮ ಸಂಸ್ಥೆಯ ಸದಸ್ಯರಿಗೆ ಸತತ 25ನೇ ವರ್ಷವೂ ಶೇ.25 ಡಿವಿಡೆಂಡ್ ನೀಡಿದೆ.
https://chat.whatsapp.com/EbVKVnWB6rlHT1mWtsgbch
ಮೂಡುಬಿದಿರೆ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕನ್ನಡ ಭವನದಲ್ಲಿ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಈ ವಿಷಯ ತಿಳಿಸಿದರು. ಸದಸ್ಯರ ನಂಬಿಕೆ, ವಿಶ್ವಾಸಾರ್ಹತೆಯ ನೆಲೆಯಲ್ಲಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ಬದ್ಧತೆಯ ಸೇವೆಯಿಂದಾಗಿ ‘ನಮ್ಮ ಸೊಸೈಟಿʼ ಎಂಬ ಅಭಿಮಾನಕ್ಕೆ ಪಾತ್ರವಾಗಿದೆ ಎಂದು ಅವರು ಹೇಳಿದರು.



ಸುದರ್ಶನ ಭಟ್ ಲೆಕ್ಕ ಪರಿಶೋಧನಾ ವರದಿ, ಲಾಭಾಂಶ ವಿಂಗಡಣೆ ವರದಿ ಮಂಡಿಸಿದರು. ಮಂಜುನಾಥ ಎಸ್. ಇವರು 2024-25ನೇ ಸಾಲಿನ ಬಜೆಟ್ಗಿಂತ ಜಾಸ್ತಿ ಖರ್ಚಾದ ಐವೇಜುಗಳ ಮಂಜೂರು, ಸಂತೋಷ್ ನಾಯ್ಕ 2025-26ನೇ ಸಾಲಿನ ಬಜೆಟ್ ಮಂಡನೆ ಕಲಾಪ ನಡೆಸಿಕೊಟ್ಟರು. ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ. ಮಾತನಾಡಿ, ಲಾಭದಲ್ಲಿ ಶೇ.50ಕ್ಕಿಂತಲೂ ಅಧಿಕ ಅಂದರೆ 4,50,00,000 ರೂ. ಅಷ್ಟನ್ನು ಕ್ಷೇಮ ನಿಧಿಗೆ ಇರಿಸಿದ್ದು ಶೇ.25 ಅನ್ನು ಸದಸ್ಯರಿಗೆ ಪಾಲು ಮುನಾಫೆಗೆ ಇರಿಸಲಾಗಿದೆ. ಅಧಿಕೃತ ಬ್ಯಾಂಕಿನ ಬಂಡವಾಳದ ಮಿತಿಯನ್ನು 30 ಕೋಟಿ ರೂ.ಗೇರಿಸಲು ನಿರ್ಧರಿಸಲಾಗಿದೆ ಎಂದರು.
ಕೇಂದ್ರ ಸರಕಾರದ ಸೂಚನೆಯಂತೆ ಸಾಮಾನ್ಯ ತಂತ್ರಜ್ಞಾನ ಅಳವಡಿಸುವ ಬಗ್ಗೆ ಚರ್ಚಿಸಿ ತ್ರಿಮುಖ ಒಪ್ಪಂದದ ಮೂಲಕ ಸೊಸೈಟಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಲು ನಿರ್ಧರಿಸಲಾಯಿತು. ಕೆಲವು ಲಿಖಿತ ಪ್ರಶ್ನೆಗಳಿಗೆ ನಿರ್ದೇಶಕ ಜಯರಾಮ ಕೋಟ್ಯಾನ್ ಉತ್ತರಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎಂ.ಗಣೇಶ್ ನಾಯಕ್, ನಿರ್ದೇಶಕರಾದ ಜಾರ್ಜ್ ಮೋನಿಸ್, ಮನೋಜ್ ಶೆಟ್ಟಿ ಸಿ.ಎಚ್.ಅಬ್ದುಲ್ ಗಫೂರ್, ಎಂ.ಪಿ.ಅಶೋಕ ಕಾಮತ್, ಎಂ.ಜ್ಞಾನೇಶ್ವರ ಕಾಳಿಂಗ ಪೈ, ಎಂ.ಪದ್ಮನಾಭ, ಜಯರಾಮ ಕೋಟ್ಯಾನ್, ಪ್ರೇಮಾ ಎಸ್.ಸಾಲ್ಯಾನ್, ಅನಿತಾ ಪಿ.ಶೆಟ್ಟಿ, ದಯಾನಂದ ನಾಯ್ಕ ಉಪಸ್ಥಿತರಿದ್ದರು. ನಿರ್ದೇಶಕ ಜಯರಾಮ ಕೋಟ್ಯಾನ್ ಸ್ವಾಗತಿಸಿ, ಉಪಾಧ್ಯಕ್ಷ ಎಂ.ಗಣೇಶ್ ನಾಯಕ್ ವಂದಿಸಿದರು.
ಪ್ರಗತಿ ಪಥದಲ್ಲಿ ಮುನ್ನಡೆ
ಸೊಸೈಟಿಯ ನಿರ್ದೇಶಕ, ಮಾಜಿ ಸಚಿವ ಕೆ.ಅಭಯಚಂದ್ರ ಅವರು ಮಾತನಾಡಿ, ಸುದೀರ್ಘ ಕಾಲ ಸೊಸೈಟಿಯ ಅಧ್ಯಕ್ಷರಾಗಿದ್ದ ಅಮರನಾಥ ಶೆಟ್ಟಿ ಅವರೂ ಒಳಗೊಂಡಂತೆ ನಿರ್ದೇಶಕರ ವೈಯಕ್ತಿಕ ರಾಜಕೀಯ ಒಲವುಗಳೇನಿದ್ದರೂ ಸೊಸೈಟಿಯು ರಾಜಕೀಯೇತರ ಶುದ್ಧ ಸಹಕಾರಿ ಸಂಘವಾಗಿ ಪ್ರಗತಿಪಥದಲ್ಲಿ ಸಾಗಿ ಬಂದಿದೆ, ಇನ್ನಷ್ಟು ಪ್ರಗತಿಯಾಗುವ ನಿಟ್ಟಿನಲ್ಲಿ ಮುನ್ನಡೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com




