ಉಡುಪಿ: ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಡುಪಿ ಇದರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಸಹಕಾರಿಯ ಮುಖ್ಯ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಅಧ್ಯಕ್ಷರಾದ ಆರ್.ವಿ.ಕುಂದರ್ ಮಾತನಾಡಿ, ಸಂಘವು ಸತತವಾಗಿ ಲಾಭದೊಂದಿಗೆ ಮುನ್ನಡೆಯುತ್ತಿದೆ. ಇದಕ್ಕೆ ಕಾರಣರಾದವರಿಗೆ ಹಾಗೂ ಅಭಿವೃದ್ಧಿಗೆ ಸಹಕರಿಸಿದ ಠೇವಣಿದಾರರಿಗೆ, ಪಿಗ್ಮಿ ಸಂಗ್ರಹಗಾರರಿಗೆ, ಸಿಬ್ಬಂದಿ ಹಾಗೂ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಿತಾ ಪ್ರಾಸ್ತಾವಿಕ ಮಾತನಾಡಿ, ವಾರ್ಷಿಕ ವರದಿ ಮಂಡಿಸಿದರು. ವಾರ್ಷಿಕ ವರ್ಷದಲ್ಲಿ ಅತಿಹೆಚ್ಚು ಠೇವಣಿ ಸಂಗ್ರಹಿಸಿದ ಸಿಬ್ಬಂದಿ, ನಿರ್ದೇಶಕರನ್ನು ಗೌರವಿಸಲಾಯಿತು. ಉಪಾಧ್ಯಕ್ಷರಾದ ಪ್ರಶಾಂತ್ ಎಸ್, ನಿರ್ದೇಶಕರಾದ ಅಶೋಕ್ ಸೇರಿಗಾರ್, ಜಲಜಾ ಕೆ, ಮಾಧವ, ನಯನ ದಾಸ್, ರಾಮ ಶೇರಿಗಾರ್, ನಾರಾಯಣ್, ಪ್ರಕಾಶ್ ಕುಂದರ್, ಶಿವಾನಂದ್, ಅಮಿತಾ, ಚಿತ್ರಾಕ್ಷಿ ಉಪಸ್ಥಿತರಿದ್ದರು. ಅಂತಾರಾಷ್ಟ್ರೀಯ ತರಬೇತುದಾರರಾದ ಎಸ್.ಎನ್ ಶೆಟ್ಟಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ದಿವ್ಯಾ ಸ್ವಾಗತಿಸಿ, ಅಶ್ಮಿತಾ ಹಾಗೂ ಚೈತ್ರ ಕಾರ್ಯಕ್ರಮ ನಿರೂಪಿಸಿದರು. ಪ್ರತೀಕ್ಷಾ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com










