ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಶ್ರೇಷ್ಠ ಸಾಧನೆಯನ್ನು ಗುರುತಿಸಿ ಬುಧವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಉತ್ತಮ ಡಿಸಿಸಿ ಬ್ಯಾಂಕ್ ಪುರಸ್ಕಾರ ಪ್ರದಾನ ಮಾಡಲಾಯಿತು.
https://chat.whatsapp.com/EbVKVnWB6rlHT1mWtsgbch
ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥ ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ರಾಜಣ್ಣ ರೆಡ್ಡಿ ಇವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಬ್ಯಾಂಕಿಗೆ ಸಂದ ಈ ಗೌರವವು ಜಿಲ್ಲೆಯ ರೈತರಿಗೆ ಹಾಗೂ ಗ್ರಾಹಕರಿಗೆ ಸಂದ ಗೌರವವಾಗಿದೆ ಎಂದು ತಿಳಿಸಿ ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಶಿವಾನಂದ ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ನಿರ್ದೇಶಕರಾದ ಲಕ್ಷ್ಮಣ ಸವದಿ, ಸಿದ್ಧಪ್ಪ ಸವದಿ, ಶರಣೇಗೌಡ ಬಯ್ಯಾಪುರ್, ಶಿವರಾಮ್ ಹೆಬ್ಬಾರ್, ಎಸ್.ರವಿ, ಟಿ.ಎಂ.ಚಂದ್ರಶೇಖರಯ್ಯ, ಶಿವಾನಂದ ಅಪ್ಪಾಸಾಹೇಬ ಮಾನಕರ್, ಕೊಡಂದೇರ ಪಿ.ಗಣಪತಿ , ಉಮಾಕಾಂತ ನಾಗಮಾರಪಳ್ಳಿ, ಜಿ.ಎನ್.ಸ್ವಾಮಿ, ಅಮರಾವತಿ ಸಿ.ಅಶ್ವತ್ , ಲಿಂಗರಾಜ್ ಎಸ್. ಚಪ್ಪರದಳ್ಳಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಎನ್.ದೇವರಾಜ್ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com






