Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಜ್ಯದ ಸಹಕಾರ ಸಂಘಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ
    News

    ರಾಜ್ಯದ ಸಹಕಾರ ಸಂಘಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ

    adminBy adminAugust 19, 2025
    Oplus_131072

    2025ನೇ ಸಾಲಿನ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

    ಬೆಂಗಳೂರು: ರಾಜ್ಯದ ಸಹಕಾರಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸರ್ಕಾರ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಕಲ್ಪಿಸುವುದು ಹಾಗೂ ನಾಮನಿರ್ದೇಶನ ಮಾಡುವಂತಹ ಅವಕಾಶ ಹೊಂದಿರುವ ಕಾನೂನನ್ನು ರೂಪಿಸಿದೆ. 2025ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿದೆ. ಪ್ರತಿಪಕ್ಷ ಸದಸ್ಯರ ಆಕ್ಷೇಪ, ಆಗ್ರಹಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಧ್ವನಿಮತದಿಂದ ಈ ವಿಧೇಯಕಕ್ಕೆ ಒಪ್ಪಿಗೆ ಪಡೆದುಕೊಂಡಿದೆ.

    https://chat.whatsapp.com/EbVKVnWB6rlHT1mWtsgbch
    2024ರಲ್ಲಿ ತಿರಸ್ಕೃತಗೊಂಡಿದ್ದ ವಿಧೇಯಕಕ್ಕೆ ತಿದ್ದುಪಡಿ ತಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿ ಪರ್ಯಾಲೋಚನೆ ಪ್ರಕ್ರಿಯೆ ನಡೆಸಿದರು. ಪ್ರಾಥಮಿಕ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಮತ್ತು ಇತರ ಪ್ರಾಥಮಿಕ ನೆರವು ಪಡೆವ ಸಹಕಾರ ಸಂಘಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್‌ಸಿ/ಎಸ್‌ಟಿ ಇತರ ಹಿಂದುಳಿದ ವರ್ಗ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ. ಈ ಮೂಲಕ ಸಹಕಾರ ಸಂಸ್ಥೆಗಳಲ್ಲಿಯೂ ಸಾಮಾಜಿಕ ನ್ಯಾಯ ಕಲ್ಪಿಸಲಾಗುತ್ತಿದೆ.

    ಆರಗ ಜ್ಞಾನೇಂದ್ರ ಆಕ್ಷೇಪ: ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ತಿದ್ದುಪಡಿ ಕಾಯ್ದೆಯಿಂದ ಸಹಕಾರಿ ಸಂಘಗಳು ದುರ್ಬಲಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ 45 ಸಾವಿರಕ್ಕೂ ಅಧಿಕ ಪ್ರಾಥಮಿಕ ಸಹಕಾರ ಸಂಘಗಳಿದ್ದು ನಿರ್ದೇಶಕರು ಪ್ರತಿ ವರ್ಷ ಆಸ್ತಿ ಘೋಷಣೆ ಮಾಡುವುದು ಅಸಾಧ್ಯವಾಗಲಿದೆ. ಅಲ್ಲದೆ, ಆಡಿಟ್ ಮಾಡಲು ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯೂ ಇದೆ. ಸಹಕಾರ ಸಂಘಗಳ ಕಾರ್ಯದ ಜೊತೆ ರಾಜ್ಯ ಸರ್ಕಾರ ಅಸಹಕಾರ ತೋರುತ್ತಿದ್ದು ಇದು ಪ್ರಜಾಪ್ರಭುತ್ವ ವಿರೋಧಿ ವಿಧೇಯಕವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
    ಆಸ್ತಿ ವಿವರ ಸಲ್ಲಿಕೆ ನಿರ್ಧಾರ ಪರಿಷ್ಕರಿಸಿ: ವಿಧೇಯಕ ತಿದ್ದುಪಡಿ ಸಮಿತಿ ಅಧ್ಯಕ್ಷರೂ ಆದ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಮೂರು ಜನರನ್ನು ನಾಮನಿರ್ದೇಶನ ಮಾಡಿದ್ದರೂ, ಅವರಿಗೆ ಮತದಾನದ ಹಕ್ಕು ನೀಡಿಲ್ಲ. ಮತದಾನಕ್ಕೆ ಅವಕಾಶ ಕೊಡಬೇಕು. ನಿರ್ದೇಶಕರ ಆಸ್ತಿ ವಿವರ ಸಲ್ಲಿಕೆ ನಿರ್ಧಾರ ಪರಿಷ್ಕರಿಸಬೇಕು ಎಂಬ ಸಲಹೆ ನೀಡಿದರು.
    ಶಾಸಕ ಜಿ.ಡಿ. ಹರೀಶ್ ಗೌಡ ಮಾತನಾಡಿ, ಮೀಸಲಾತಿಗೆ ವಿರೋಧವಿಲ್ಲ. ಆದರೆ ಇದರಲ್ಲಿ ಸರ್ಕಾರ ಮತ್ತು ರಾಜಕೀಯ ಹಸ್ತಕ್ಷೇಪ ಇರದಂತೆ ನೋಡಿಕೊಳ್ಳಬೇಕು. ಹಸ್ತಕ್ಷೇಪ ಆದರೆ ಸಹಕಾರ ಸಂಘಗಳು ಉಳಿಯುವುದಿಲ್ಲ. ಜತೆಗೆ ದುರುಪಯೋಗ ಆಗುತ್ತಿರುವ 121ನೇ ಕಾಯ್ದೆಗೆ ತಿದ್ದುಪಡಿ ತರುವಂತೆ ಹೇಳಿದರು.
    ಪ್ರತಿವರ್ಷ ಆಸ್ತಿ ವಿವರ ಸಲ್ಲಿಕೆ ಸಾಧ್ಯವಾ?: ಹಿರಿಯ ಶಾಸಕ ಜಿ.ಟಿ ದೇವೇಗೌಡ ಮಾತನಾಡಿ, ದಲಿತರಿಗೆ ಮೀಸಲಾತಿ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ವಿರೋಧವಿಲ್ಲ. ಆದರೆ ನಿರ್ದೇಶಕರು ಪ್ರತಿವರ್ಷ ಆಸ್ತಿ ವಿವರ ಘೋಷಣೆ ಮಾಡುವುದು ಸಾಧ್ಯವಾ? ಸರ್ಕಾರ ಬೇರೆ, ಸಹಕಾರ ಬೇರೆ. ಹಾಗಾಗಿ ತಿದ್ದುಪಡಿ ತರುವ ಬದಲು ಸಹಕಾರ ಕ್ಷೇತ್ರವನ್ನೇ ಮುಚ್ಚಿಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಎಸ್ಸಿ/ಎಸ್ಟಿ ಸಮುದಾಯ ಏಳಿಗೆ ಹೊಂದುವುದು ಬೇಡವೇ?
    ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ನಾಮನಿರ್ದೇಶನ ಮಾಡಿದರೆ ಸಹಕಾರ ಸಂಘಗಳು ಮುಚ್ಚುತ್ತವೆ ಎಂಬುದು ಸರಿಯಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಧ್ವನಿ ಏರಿಸಿದರು. ಚರ್ಚೆ ವೇಳೆ ಶಾಸಕ ಜಿ.ಟಿ. ದೇವೇಗೌಡ ಅವರು, ಸರ್ಕಾರ ಕೈಗೊಳ್ಳಲು ಹೊರಟ ಕ್ರಮಗಳಿಂದಾಗಿ ಸಹಕಾರ ಸಂಘಗಳನ್ನು ಮುಚ್ಚುವ ಹಂತಕ್ಕೆ ಬರಲಿದೆ ಎಂದು ಕಳವಳ ಹೊರಹಾಕಿದಾಗ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಶಿವರಾಜ್ ತಂಗಡಗಿ, ಜಿ.ಟಿ. ದೇವೇಗೌಡ ಅವರ ಮಾತು ಸರಿಯಲ್ಲ. ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೇರಿದವರನ್ನು ನಾಮನಿರ್ದೇಶನ ಮಾಡಿದರೆ ಸಹಕಾರ ಸಂಘಗಳು ಮುಚ್ಚುತ್ತವೆ ಎಂದರೆ ಏನು ಅರ್ಥ? ಸಹಕಾರ ಕ್ಷೇತ್ರದಲ್ಲಿ ಎಸ್ಸಿ/ಎಸ್ಟಿ ಸಮುದಾಯದವರು ಏಳಿಗೆ ಹೊಂದುವುದಕ್ಕೆ ಅವಕಾಶ ಸಿಗಬಾರದೇ? ವಿಧೇಯಕದಲ್ಲಿನ ತಪ್ಪುಗಳ ಬಗ್ಗೆ ತಿಳಿಸಿ. ಅದರ ಬದಲು ಎಸ್ಸಿ/ಎಸ್ಟಿ ಸಮುದಾಯದವರನ್ನು ಸೇರಿಸಿದರೆ ಸಂಘ ಹಾಳಾಗುತ್ತದೆ ಎಂಬರ್ಥದಲ್ಲಿ ಮಾತನಾಡಬೇಡಿ ಎಂದರು.

    ಸಹಕಾರ ಸಂಘಗಳ ಶಕ್ತಿ ಕಡಿಮೆ ಆಗುವಂತೆ ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಮಾಡುತ್ತಿವೆ. ಹೀಗಾಗಿ ಸಂಘಗಳ ಪುನಶ್ಚೇತನಕ್ಕೆ ನಾವು ಪ್ರಯತ್ನ ಮಾಡುತ್ತಿದ್ದೇವೆ. ಒಟ್ಟಾರೆ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

    | ಎಚ್.ಕೆ.ಪಾಟೀಲ ಕಾನೂನು, ಸಂಸದೀಯ ಸಚಿವ

    ಕಾಯ್ದೆಯ ಉದ್ದೇಶ, ಪ್ರಮುಖ ಅಂಶಗಳು
    ನಿರ್ದೇಶಕರಲ್ಲಿ ಆರ್ಥಿಕ ಶಿಸ್ತು, ಜವಾಬ್ದಾರಿ ತರುವುದು

    ನಿರ್ದೇಶಕರು ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ

    ಇನ್ಮುಂದೆ ಪ್ರತಿವರ್ಷ ಆಸ್ತಿ ಮಾಹಿತಿ ಸಲ್ಲಿಸಲೇಬೇಕು

    ಆಸ್ತಿ ವಿವರ ನೀಡದಿದ್ದರೆ ನಿರ್ದೇಶಕ ಸ್ಥಾನಕ್ಕೆ ಕುತ್ತು

    3 ನಿರ್ದೇಶಕರಲ್ಲ, 3 ಸದಸ್ಯರ ನಾಮನಿರ್ದೇಶನ

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    G T Devegowda H. K Pateel Karnataka Vidhansabha Sahakara Sanghagala tiddupadi kayde 2025 Shivaraj Tangadagi
    Previous Articleಸ್ವರ್ಣಕುಂಭ ವಿವಿಧೋದ್ದೇಶ ಸಹಕಾರ ಸಂಘ ಶೇ.18 ಡಿವಿಡೆಂಡ್‌
    Next Article ಎಸ್‌ಸಿ/ಎಸ್‌ಟಿ/ಒಬಿಸಿಗಳಿಗೆ ಮೀಸಲಾತಿ, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನಿರಾಕರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.