ಮೈಸೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಇದರ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ನಿವೇಶನದ ಭೂಮಿ ಪೂಜೆ ನೆರವೇರಿಸಲಾಯಿತು.
https://chat.whatsapp.com/EbVKVnWB6rlHT1mWtsgbch
ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆಯಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷರಾದ ಪ್ರಸನ್ನಕುಮಾರ್ ಎ.ಆರ್., ನಿರ್ದೇಶಕರಾದ ಕೃಷ್ಣಾರೆಡ್ಡಿ ಬಿ.ಹೆಚ್., ಮಂಜುನಾಥ್ ಎಸ್.ಕೆ., ಭಾರತಿ ಜಿ.ಭಟ್ ಹಾಗೂ ಶಿಕ್ಷಣ, ಸಲಹಾ ಸಮಿತಿ ಸದಸ್ಯರಾದ ಹೆಚ್.ವಿ.ರಾಜೀವ್, ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕರಾದ ಸಿ.ಎನ್. ಪರಶಿವಮೂರ್ತಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್, ಉಪನಿಬಂಧಕರಾದ ವಿಜಯಕುಮಾರ್ , ಮೈಸೂರು ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು, ಮಂಡ್ಯ ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು ಹಾಗೂ ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಪ್ರತಿನಿಧಿಗಳು, ಸಂಯುಕ್ತ ಸಹಕಾರಿಯ ತರಬೇತಿ ಅಧಿಕಾರಿ ವಿ.ಜೆ. ಕಾರಕೂನ್, ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಹಾಗೂ ಇತರೆ ಪ್ರಾಂತದ ಸಿಬ್ಬಂದಿಗಳು ಭಾಗವಹಿಸಿದ್ದರು.


