ಮಂಗಳೂರು: ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ಆರನೇ ಮಹಾಸಭೆ ಭಾನುವಾರ ಮಂಗಳೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.
https://chat.whatsapp.com/EbVKVnWB6rlHT1mWtsgbch
ಈ ಸಭೆಯಲ್ಲಿ 2024-2025ನೇ ಸಾಲಿನ ಶೇ.12 ಲಾಭಾಂಶ ಘೋಷಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ರವೀಂದ್ರನಾಥ ಶೆಟ್ಟಿ, ಉಪಾಧ್ಯಕ್ಷರಾದ ದಿನಕರ ಪೂಂಜಾ, ನಿರ್ದೇಶಕರಾದ ಕೆ.ಟಿ ರೈ, ಉದಯ ಕುಮಾರ, ಟಿ.ವಿ ರೈ, ನರೇಂದ್ರನಾಥ ಕಾಮತ್, ಶಾಲಿನಿ ಶೆಟ್ಟಿ, ಶಾಮಸುಂದರರಾವ್, ಜೆ.ವಿ ಶೆಟ್ಟಿ, ಶೋಭಾ ರಾವ್, ಸದಾಶಿವ ವಿ.ಎಸ್ ಮತ್ತು ದಿನಕರ ರೈ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ರಾವ್ ಸಿ ಕಾರ್ಯಕ್ರಮ ನಿರ್ವಹಿಸಿದರು.

