ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ಮಾಹಿತಿ
ಸಿಂಧನೂರು: ಇಲ್ಲಿನ ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿ ಸಂಘವು 46.40 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ತಿಳಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಸಹಕಾರಿಯ ಕಚೇರಿಯಲ್ಲಿ ಇತ್ತೀಚೆಗೆ ನಡೆದ 9ನೇ ಸರ್ವ ಸದಸ್ಯರ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿಯು ಪ್ರಸಕ್ತ ವರ್ಷ 10 ಕೋಟಿ ರೂ.ಗಳ ವಹಿವಾಟು ನಡೆಸಿದೆ. ಸದಸ್ಯರಿಗೆ ಶೇ.12ರಷ್ಟು ಲಾಭಾಂಶ ಘೋಷಣೆ ಮಾಡಲಾಗುತ್ತಿದೆ. ಸದಸ್ಯರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ನಡೆದುಕೊಂಡಿದ್ದೇವೆ. ಆಡಳಿತ ಮಂಡಳಿ ಪರಿಶ್ರಮ, ಸದಸ್ಯರ ಸಹಕಾರ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯಿಂದ ಕಡಿಮೆ ಅವಧಿಯಲ್ಲಿ ನಮ್ಮ ಸಹಕಾರಿಯು ವೇಗವಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಸದಸ್ಯರಿಗಾಗಿ ವಿನೂತನ ಯೋಜನೆಗಳನ್ನು ಜಾರಿ ಮಾಡುವ ಉದ್ದೇಶವಿದೆ ಎಂದರು.

ಸಂಘದ ಉಪಾಧ್ಯಕ್ಷ ಅಮರೇಶ ಹುಡಾ, ಕಾನೂನು ಸಲಹೆಗಾರ ಜೆ.ರಾಯಪ್ಪ ವಕೀಲ, ಸಹಕಾರಿ ಇಲಾಖೆಯ ಮಲ್ಲಿಕಾರ್ಜುನ ಕಮತಗಿ, ಚೈತನ್ಯ ಸಹಕಾರಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ದುರುಗಪ್ಪ ಬಾಲಿ, ನಿರ್ದೇಶಕರಾದ ಅಮರೇಶ ಬಾಗೋಡಿ, ಬಸವರಾಜ ಪೂಜಾರ, ಕೆ.ಹನುಮೇಶ, ವೀರೇಶ ಅಂಗಡಿ, ವೆಂಕಟೇಶ ನವಲಿ, ಯಮನಪ್ಪ ಸಿಇಒ ವೀರೇಶ ಪೂಜಾರಿ, ಸದಸ್ಯ ಸಿ.ಹೆಚ್.ವೆಂಕಟೇಶ್ವರಲು ಮೊದಲಾದವರು ಭಾಗವಹಿಸಿದ್ದರು.

