ಮಂಗಳೂರು: ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಕೃಷ್ಣ ಮಿಷನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ., ರಥಬೀದಿ ಮಂಗಳೂರು ಮತ್ತು ಮಹಾರಾಣ ಪ್ರತಾಪ್ ಸ್ಪೋರ್ಟ್ಸ್ ಕ್ಲಬ್ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ.ಆಸ್ಪತ್ರೆ ಮತ್ತು ಕೆ.ಎಸ್. ಹೆಗ್ಡೆ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಖ್ಯಾತ ತಜ್ಞ ವೈದ್ಯರುಗಳ ಉಪಸ್ಥಿತಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವು ಭಾನುವಾರ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ಇರುವ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 9ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಿಬಿರದಲ್ಲಿ ಮಂಗಳೂರಿನ ಖ್ಯಾತ ತಜ್ಞ ವೈದ್ಯರುಗಳು ಉಪಸ್ಥಿತರಿದ್ದು, ಶ್ವಾಸಕೋಶ, ಸಕ್ಕರೆ ಕಾಯಿಲೆ, ಲಿವರ್, ಉಬ್ಬಸ, ಜ್ವರ, ಥೈರಾಯಿಡ್ ತಜ್ಞರಾದ ಡಾ|ಚಕ್ರಪಾಣಿ ಎಂ. ಹಾಗೂ ಡಾ.ಬಿ.ದೇವದಾಸ್ ರೈ, ಹೃದಯ ಸಂಬಂಧಿತ ಖಾಯಿಲೆಗಳ ತಜ್ಞರಾದ ಡಾ|ಪದ್ಮನಾಭ ಕಾಮತ್, ಕಿವಿ, ಮೂಗು, ಗಂಟಲು ತಜ್ಞರಾದ ಡಾ|ವಿಜಯೇಂದ್ರ ಶೆಣೈ, ಮೂತ್ರಪಿಂಡ , ಕಿಡ್ನಿ ಸಮಸ್ಯೆ ತಜ್ಞರಾದ ಡಾ|ಭೂಷಣ್ ಶೆಟ್ಟಿ, ಬೆನ್ನುನೋವು, ಗಂಟು, ಮಂಡಿನೋವು, ಸಂಧಿವಾತ ತಜ್ಞರಾದ ಡಾ|ದೀಪಕ್ ಹೆಗ್ಡೆ, ನೇತ್ರ ಪರೀಕ್ಷೆ, ಕಣ್ಣಿನ ಪೊರೆ ಹಾಗೂ ಇತರ ಚಿಕಿತ್ಸೆ ತಜ್ಞರಾದ ಡಾ|ಕೀರ್ತನ್ ರಾವ್, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ ಡಾ|ವೀಣಾ ಆರ್.ಭಟ್, ವೈದ್ಯಕೀಯ ಚಿಕಿತ್ಸೆ ತಜ್ಞರಾದ ಡಾ| ಪ್ರಜೀತ್ ಹೆಗ್ಡೆ ಭಾಗವಹಿಸಲಿದ್ದಾರೆ.
ಈ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರಾಮಕೃಷ್ಣ ಮಿಷನ್ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜೀ ದೀಪ ಪ್ರಜ್ವಲನೆಗೈಯಲ್ಲಿದ್ದು, ಶಿಬಿರದ ಉದ್ಘಾಟನೆಯನ್ನು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡಬಿದಿರೆ ಇದರ ಅಧಕ್ಷರಾದ ಡಾ|ಎಂ.ಮೋಹನ್ ಆಳ್ವ ಮಾಡಲಿರುವರು. ಕೆ.ಎಂ.ಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ|ಚಕ್ರಪಾಣಿ ಎಂ. ಸಭಾಧ್ಯಕ್ಷತೆ ವಹಿಸಲಿದ್ದು ಮುಖ್ಯ ಅಥಿತಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ನಗರ ದಕ್ಷಿಣದ ಶಾಸಕರಾದ ಡಿ.ವೇದವ್ಯಾಸ ಕಾಮತ್ ಮಂಗಳೂರಿನ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ.ಅರುಣ್ ಐತಾಳ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಪಿ.ಬಿ.ಹರೀಶ್ ರೈ, ಚಲನಚಿತ್ರ ನಟ ರೂಪೇಶ್ ಶೆಟ್ಟಿ, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಲಿ. ಅಧ್ಯಕ್ಷರಾದ ಡಾ| ಎಸ್. ಆರ್. ಹರೀಶ್ ಆಚಾರ್ಯ, ವಕೀಲರಾದ ರಾಘವೇಂದ್ರ ರಾವ್ ಉಪಸ್ಥಿತರಿರುವರು ಎಂದು ಕಿರಣ್ ಗೇಮ್ಸ್ ಟೀಮಿನ ಅಧ್ಯಕ್ಷರಾದ ಶ್ರೀ ಬಿ. ಕಿಶೋರ್ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


