ಬಂಟ್ವಾಳ: 2024-2025ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾಗುವ ಸಾಧನಾ ಪುರಸ್ಕಾರವನ್ನು ನೀಡಲಾಗಿದೆ.
https://chat.whatsapp.com/EbVKVnWB6rlHT1mWtsgbch
ಶನಿವಾರ ನಡೆದ ಎಸ್ಸಿಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸಿದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿಯವರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪ್ರಶಸ್ತಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಬೆಳಪು ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಎಲ್ಲಾ ನಿರ್ದೇಶಕರು, ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್. ಎನ್.ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694





