ಬಂಟ್ವಾಳ: ಇಲ್ಲಿನ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
https://chat.whatsapp.com/EbVKVnWB6rlHT1mWtsgbch
ಮಂಗಳೂರಿನಲ್ಲಿ ಶನಿವಾರ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್.ಎನ್ ರಮೇಶ್, ಉಡುಪಿ ಜಿಲ್ಲಾ ಉಪನಿಬಂಧಕರಾದ ಲಾವಣ್ಯ, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜಾರಾಮ ಭಟ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್ ಮೊದಲಾದವರು ಹಾಜರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


