ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅಧ್ಯಕ್ಷತೆಯಲ್ಲಿ ಭಾನುವಾರ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಸಂಘದ ಅಧ್ಯಕ್ಷ ಪದ್ಮ ಗೌಡ ಮಾತನಾಡಿ ಸಂಘವು ಆರು ವರ್ಷಗಳಿಂದ ಲಾಭದಾಯಕವಾಗಿ ನಡೆಯುತ್ತಿದೆ. ಸಂಘದಿಂದ ಕಡಿಮೆ ಬಡ್ಡಿ ದರದಲ್ಲಿ ವಾಹನ ಸಾಲ, ಜಾಮೀನು ಖರೀದಿ ಸಾಲ, ಗೃಹ ಸಾಲ ಇತ್ಯಾದಿ ಸಾಲಗಳನ್ನು ನೀಡುತ್ತಿದ್ದೇವೆ. ಸೋಮಂತಡ್ಕ ಹಾಗೂ ಕಲ್ಲೇರಿ ಎರಡು ಶಾಖೆಗಳು ಉತ್ತಮ ರೀತಿಯಲ್ಲಿ ನಡೆಯುತ್ತದೆ. ಸಂಘವು ಪ್ರಸಕ್ತ ಸಾಲಿನಲ್ಲಿ 80 ಕೋಟಿ ವ್ಯವಹಾರ ನಡೆಸಿ, 40 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ 10 ಶೇಕಡಾ ಡಿವಿಡೆಂಡ್ ನೀಡುವುದಾಗಿ ಘೋಷಿಸಿದರು.

ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮಾತನಾಡಿ, ಸೋಮಂತಡ್ಕ ಹಾಗೂ ಕಲ್ಲೇರಿ ಶಾಖೆಯಲ್ಲಿ ಒಳ್ಳೆಯ ರೀತಿಯಲ್ಲಿ ವ್ಯವಹಾರ ನಡೆದು ಶಾಖೆ ಲಾಭದಲ್ಲಿ ಇದೆ. ಆರ್ಥಿಕವಾಗಿ ಮುಂದೆ ಬರಬೇಕು ಎಂಬ ದೃಷ್ಟಿಯಿಂದ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಪ್ರಾರಂಭ ಮಾಡಿದ್ದೇವೆ. ವಾಣಿ ಶಿಕ್ಷಣ ಸಂಸ್ಥೆ, ಸ್ಪಂದನಾ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಒಳ್ಳೆಯ ರೀತಿಯಿಂದ ನಡೆಯುತ್ತಿದೆ. ಸಂಘದಲ್ಲಿ ನಾಲ್ಕು ಸಾವಿರ ಸದಸ್ಯರು ಇದ್ದು ಎರಡು ಶಾಖೆಯನ್ನು ತೆರೆಯಲು ಚಿಂತನೆ ಮಾಡಿದ್ದೇವೆ ಎಂದು ಹೇಳಿದರು.

ನಿರ್ದೇಶಕರಾದ ಗೋಪಾಲಕೃಷ್ಣ ಬಿ., ನಾರಾಯಣ ಗೌಡ, ಮಾಧವ ಗೌಡ, ಜಯಾನಂದ ಗೌಡ, ಯಶವಂತ ಬಿ.ಟಿ., ಸುರೇಶ್ ಬಿ., ಸುನೀಲ್ ಎ., ಕೃಷ್ಣಪ್ಪ ಗೌಡ, ಪುರಂದರ ಗೌಡ, ಭವಾನಿ ಕೆ., ಉಷಾದೇವಿ ಬಿ., ಶ್ರೀನಾಥ್ ಕೆ.ಎಮ್., ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ್ ಕುಮಾರ್ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ್ ಲೆಕ್ಕಪತ್ರ ವಾಚಿಸಿದರು. ನಿರ್ದೇಶಕ ಮಾಧವ ಧನ್ಯವಾದವಿತ್ತರು.

