ತೊಕ್ಕೊಟ್ಟು: ದಕ್ಷಿಣಕನ್ನಡ ಜಿಲ್ಲೆಯ ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ ತೊಕ್ಕೊಟ್ಟು ಇದರ 13ನೇ ವರ್ಷದ ವಾರ್ಷಿಕ ಮಹಾಸಭೆ ಭಾನುವಾರ ಕುತ್ತಾರು ಎಂವೈಎಂ ಸಭಾಂಗಣದಲ್ಲಿ ಉಪಾಧ್ಯಕ್ಷರಾದ ಸುಂದರ ಗಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಸಹಕಾರಿಯ ಉಪಾಧ್ಯಕ್ಷರಾದ ಸುಂದರ ಗಟ್ಟಿ, ಸೊಸೈಟಿಯ ನಿರ್ದೇಶಕರು ಹಾಗೂ ಕಾನೂನು ಸಲಹೆಗಾರರು ದೀಪ ಪ್ರಜ್ವಲಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಸಂಘವು 2024-25ರ ಅವಧಿಯಲ್ಲಿ ರೂ. 4.21 ಕೋಟಿ ವ್ಯವಹಾರ ನಡೆಸಿ ರೂ.13,86,779.82 ಲಾಭ ಗಳಿಸಿದೆ. ಲಾಭಾಂಶದ ವರದಿಯನ್ನು ಸುಂದರ ಗಟ್ಟಿ ಸಭೆಯ ಮುಂದೆ ಮಂಡಿಸಿ ಸದಸ್ಯರಿಗೆ ಶೇ.5 ಡಿವಿಡೆಂಡ್ ಘೋಷಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಕ್ರಮ್ ಶೆಟ್ಟಿಯವರು 2024 -25ನೇ ಸಾಲಿನ ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು.

2025ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಗಳಿಸಿದ ಸ್ವಸಹಾಯ ಸಂಘದ ಸದಸ್ಯರ ಹತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 1ರಿಂದ 10ನೇ ತರಗತಿಯವರೆಗಿನ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. 2 ಅತ್ಯುತ್ತಮ ಸ್ವಸಹಾಯ ಸಂಘ ಪ್ರಶಸ್ತಿ ಹಾಗೂ 12 ಉತ್ತಮ ಸ್ವಸಹಾಯ ಸಂಘಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಹಕಾರಿಯ ನಿರ್ದೇಶಕರಾದ ಸೂರಜ್, ಜಗನ್ನಾಥ ಶೆಟ್ಟಿ, ಮಹೇಶ, ಹರೀಶ್ಚಂದ್ರ ಖಾರ್ವಿ, ಚಂದು ನಾಯ್ಕ, ವಿಶ್ವನಾಥ, ಗೀತಾ ಬಿ.ನಾಯ್ಕ, ಶೋಭಾ ಕಜೆ, ನಾಗವೇಣಿ ಶೆಟ್ಟಿ, ವೀಣಾ ಭಟ್, ಅಮಿತಾ ಶೆಟ್ಟಿ, ಕಾನೂನು ಸಲಹೆಗಾರರಾದ ಲವೀಶಾ ಜಿ, ನೇಮಕಾತಿ ಸಮಿತಿಯ ಬಾಹ್ಯತಜ್ಞರಾದ ಶಶಿಧರ್ ಶೆಟ್ಟಿ ಕೆರಮ, ಸಹಕಾರಿಯ ಸಿಬ್ಬಂದಿ, ಪಿಗ್ಮಿ ಏಜೆಂಟರು ಮತ್ತು ಸಹಕಾರಿಯ ಸದಸ್ಯರು ಹಾಜರಿದ್ದರು. ಸಹಕಾರಿಯ ಸಿಬ್ಬಂದಿಗಳು ಪ್ರಾರ್ಥಿಸಿದರು. ಯೋಜನಾಧಿಕಾರಿ ಜಿತೇಂದ್ರ ಪಿ ಸ್ವಾಗತಿಸಿದರು. ಸುಕೇಶ್ ಮಂಜನಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com





