ಅಧ್ಯಕ್ಷರಾಗಿ ಪ್ರಶಾಂತ್ ಎ.ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್ ಕುಮಾರ್ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್ಕಾಮ್ಸ್) ಮಂಗಳೂರು ಇದರ ಅಧ್ಯಕ್ಷರಾಗಿ ಪ್ರಶಾಂತ್ ಎ.ಗಟ್ಟಿ, ಉಪಾಧ್ಯಕ್ಷರಾಗಿ ಸಚಿನ್ ಕುಮಾರ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಮಂಗಳೂರು ಹಾಪ್ಕಾಮ್ಸ್ ಆಡಳಿತ ಕಿಸಾನ್ ಸಂಘ ಬೆಂಬಲಿತ ಸಹಕಾರ ಭಾರತಿ ತೆಕ್ಕೆಗೆ ಲಭಿಸಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ನಿರ್ದೇಶಕ ಮಂಡಳಿಗೆ ಇತ್ತೀಚೆಗೆ ಅವಿರೋಧ ಆಯ್ಕೆ ನಡೆದಿತ್ತು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಇವರು ನಡೆಸಿಕೊಟ್ಟರು. ಸಭೆಯಲ್ಲಿ ನಿರ್ದೇಶಕರಾದ ಜಯಪ್ರಕಾಶ್ ಕೂಜುಗೋಡು, ಜಯಕುಮಾರ್ ಪರ್ಕಳ, ಹರೀಶ್, ಯಶೋದರ ಶೆಟ್ಟಿ ಬಿ., ಕೆ.ಲಕ್ಷ್ಮೀನಾರಾಯಣ ಉಡುಪ, ಸೀತಾರಾಮ ಗಾಣಿಗ, ರತ್ನರಾಜ್ ಪಿ., ಅನಂತಪದ್ಮನಾಭ ಉಡುಪ ಕೆ., ವಿಜಯ ರೈ, ಚೀಂಪ, ಸುಂದರ ನಾಯ್ಕ, ಮಮತಾ ಎಂ.ಶೆಟ್ಟಿ, ಸುಭದ್ರಾ ರಾವ್ ಉಪಸ್ಥಿತರಿದ್ದರು.
ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಪ್ರವೀಣ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ವ್ಯವಸ್ಥಾಪಕ ರವಿಚಂದ್ರ ಶೆಟ್ಟಿ ವಂದಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಹಕಾರ ಭಾರತಿಯ ಮಂಗಳೂರು ಮಹಾನಗರ ಅಧ್ಯಕ್ಷರಾದ ಜಿ.ಆರ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಚರಣ್ರಾಜ್, ರಾಜ್ಯ ಸಹಕಾರ್ಯದರ್ಶಿ ಗಣೇಶ್ ಶೆಣೈ ಮೊದಲಾದವರು ಅಭಿನಂದಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com






